ಬ್ರೇಕಿಂಗ್ ನ್ಯೂಸ್
23-11-23 08:40 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ನ.23: ಸಾಕು ಪ್ರಾಣಿಗಳ ಕ್ಲಿನಿಕ್ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಇಲ್ಲಿನ ಪಾಶಾನ್ ಉಪನಗರದಲ್ಲಿರುವ ಪೆಟ್ ಕ್ಲಿನಿಕ್ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ 'ಹನಿ' ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ ವ್ಯಾಕ್ಸಿನೇಷನ್ ಹಾಗೂ ಉಗುರು ಟ್ರಿಮ್ಮಿಂಗ್ಗೆಂದು ಶ್ವಾನವನ್ನು ಪೆಟ್ ಕ್ಲಿನಿಕ್ನ ವೈದ್ಯರಿಗೆ ಮಾಲಕಿ ಒಪ್ಪಿಸಿದ್ದರು. ಡಾ. ಶುಭಂ ರಜಪೂತ್ ಹಾಗೂ ಇತರ ಇಬ್ಬರು ಸೇರಿಕೊಂಡು ಶ್ವಾನವನ್ನು ಮರಕ್ಕೆ ಕಟ್ಟಲು ಪ್ರಯತ್ನಿಸುತ್ತಿದ್ದರು. ಆದರೆ, ಡಾ. ರಜಪೂತ್ ಕಟ್ಟಿದ್ದ ಬೆಲ್ಟ್ ಶ್ವಾನದ ಕುತ್ತಿಗೆಗೆ ಬಿಗಿದುಕೊಂಡಿದೆ. ಪರಿಣಾಮ ಶ್ವಾನ ಕುಸಿದು ಕೆಳಗೆ ಬಿದ್ದಿದೆ.
ನಂತರ ಚಿಕಿತ್ಸೆಗಾಗಿ ವೈದ್ಯರ ಕೊಠಡಿಗೆ ಶ್ವಾನವನ್ನು ಎತ್ತಿಕೊಂಡು ಹೋಗಲಾಗಿದೆ. ಆಗ 15 ನಿಮಿಷಗಳ ಬಳಿಕ ಮತ್ತೊಬ್ಬ ವೈದ್ಯ ಶ್ವಾನ ಮೃತಪಟ್ಟಿದೆ ಎಂದು ಮಾಲಕಿಗೆ ತಿಳಿಸಿದ್ದಾರೆ. ಆದರೆ, ಶ್ವಾನದ ಸಾವಿನ ಕಾರಣದ ಕುರಿತು ಸರಿಯಾದ ಮಾಹಿತಿಯನ್ನು ಈ ವೈದ್ಯರು ನೀಡಿಲ್ಲ. ಹೀಗಾಗಿ ಈ ಘಟನೆಯ ನಂತರ ಮಾಲಕಿ ಚತುರ್ಶೃಂಗಿ ಪೊಲೀಸ್ ಠಾಣೆಗೆ ಬಂದು ಡಾ.ಸಜೀನ್ ರಾಜಾಧ್ಯಕ್ಷ (60), ಡಾ.ಶುಭಂ ರಜಪೂತ್ (35) ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ಮಾಲಕಿಯು ಲ್ಯಾಬ್ರಡಾರ್ ಶ್ವಾನ 'ಹನಿ'ಯನ್ನು ಕಳೆದ 8 ವರ್ಷಗಳಿಂದ ಸಾಕುತ್ತಿದ್ದರು. ಅದನ್ನು 40 ದಿನಗಳ ಮರಿಯಾಗಿದ್ದಾಗಲೇ ಮನೆಗೆ ತರಲಾಗಿತ್ತು. ಕ್ಲಿನಿಕ್ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಶ್ವಾನ ಮೃತಪಟ್ಟಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
In a startling turn of events at Pune’s Chaturshrungi Police Station, a routine dog vaccination took a tragic turn, leading to a legal dispute and raising questions about the handling of the situation by two local veterinary doctors.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm