ಬ್ರೇಕಿಂಗ್ ನ್ಯೂಸ್
26-11-23 12:06 pm HK NEWS DESK ದೇಶ - ವಿದೇಶ
ಕೊಚ್ಚಿ, ನ 26: ಕೇರಳದ ಕೊಚ್ಚಿ ವಿಶ್ವವಿದ್ಯಾಲಯದಲ್ಲಿ ನಡೆದ ಟೆಕ್ ಫೆಸ್ಟ್ನಲ್ಲಿ ಕಾಲ್ತುಳಿತ ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನೇಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರನ್ನು ಗುರುತಿಸಲಾಗಿದೆ. ಕೂತತುಕುಲಂನಿಂದ ಅತುಲ್ ತಂಬಿ ಮತ್ತು ಉತ್ತರ ಪರವೂರಿದ ಅಂದ್ರಿಫ್ತಾ ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ
ಇಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು. ಸಭಾಂಗಣದಲ್ಲಿ ಖ್ಯಾತ ಗಾಯಕಿ ನಿಕಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ನಾಲ್ವರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಇಲ್ಲಿಯ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.



ಗಾಯನ ವೇಳೆ ವಿದ್ಯಾರ್ಥಿಗಳು ಸಭಾಂಗಣದಲ್ಲಿ ನೃತ್ಯ ಮಾಡುತ್ತಿದ್ದರು. ಇದೇ ವೇಳೆ, ದಿಢೀರ್ ಮಳೆ ಸುರಿದಿದ್ದರಿಂದ ಹೊರಗಿದ್ದ ವಿದ್ಯಾರ್ಥಿಗಳು ಏಕಾಏಕಿ ಸಭಾಂಗಣ ಒಳಗೆ ಓಡಿ ಹೋಗಲು ಆರಂಭಿಸಿದ್ದಾರೆ. ಪರಿಣಾಮ ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಟೆಕ್ ಫೆಸ್ಟ್ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ ವಿದ್ಯಾರ್ಥಿಗಳ ಕಾಲ್ತುಳಿತ ಉಂಟಾಗಿದೆ. ಈ ವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಕೊಚ್ಚಿ ವಿಶ್ವವಿದ್ಯಾಲಯದ ವೈಸ್ ಚಾನ್ಸೆಲರ್ ಡಾ. ಶಂಕರನ್ ಮಾತನಾಡಿ, ಟೆಕ್ ಫೆಸ್ಟ್ ಅಂಗವಾಗಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 2000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥಿರ್ಗಳು ಭಾಗಿಯಾಗಿದ್ದರು. ಮಳೆಯಿಂದ ವಿದ್ಯಾರ್ಥಿಗಳು ಸಭಾಂಗಣದೊಳಗೆ ಬರಲು ಮುಂದಾದ ವೇಳೆ ನೂಕುನುಗ್ಗಲು ಉಂಟಾಗಿ ಕೆಲ ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
Four students were killed, and over 60 were injured in a stampede during Cochin university annual festival here on November 25 night, police said. Officials said that the stampede occurred before well known singer Nikita Gandhi was to perform for a musical festival in the open air auditorium of Cochin University of Science and Technology (CUSAT) here.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm