ಬ್ರೇಕಿಂಗ್ ನ್ಯೂಸ್
26-11-23 12:06 pm HK NEWS DESK ದೇಶ - ವಿದೇಶ
ಕೊಚ್ಚಿ, ನ 26: ಕೇರಳದ ಕೊಚ್ಚಿ ವಿಶ್ವವಿದ್ಯಾಲಯದಲ್ಲಿ ನಡೆದ ಟೆಕ್ ಫೆಸ್ಟ್ನಲ್ಲಿ ಕಾಲ್ತುಳಿತ ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನೇಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರನ್ನು ಗುರುತಿಸಲಾಗಿದೆ. ಕೂತತುಕುಲಂನಿಂದ ಅತುಲ್ ತಂಬಿ ಮತ್ತು ಉತ್ತರ ಪರವೂರಿದ ಅಂದ್ರಿಫ್ತಾ ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ
ಇಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು. ಸಭಾಂಗಣದಲ್ಲಿ ಖ್ಯಾತ ಗಾಯಕಿ ನಿಕಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ನಾಲ್ವರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಇಲ್ಲಿಯ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.



ಗಾಯನ ವೇಳೆ ವಿದ್ಯಾರ್ಥಿಗಳು ಸಭಾಂಗಣದಲ್ಲಿ ನೃತ್ಯ ಮಾಡುತ್ತಿದ್ದರು. ಇದೇ ವೇಳೆ, ದಿಢೀರ್ ಮಳೆ ಸುರಿದಿದ್ದರಿಂದ ಹೊರಗಿದ್ದ ವಿದ್ಯಾರ್ಥಿಗಳು ಏಕಾಏಕಿ ಸಭಾಂಗಣ ಒಳಗೆ ಓಡಿ ಹೋಗಲು ಆರಂಭಿಸಿದ್ದಾರೆ. ಪರಿಣಾಮ ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಟೆಕ್ ಫೆಸ್ಟ್ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ ವಿದ್ಯಾರ್ಥಿಗಳ ಕಾಲ್ತುಳಿತ ಉಂಟಾಗಿದೆ. ಈ ವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಕೊಚ್ಚಿ ವಿಶ್ವವಿದ್ಯಾಲಯದ ವೈಸ್ ಚಾನ್ಸೆಲರ್ ಡಾ. ಶಂಕರನ್ ಮಾತನಾಡಿ, ಟೆಕ್ ಫೆಸ್ಟ್ ಅಂಗವಾಗಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 2000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥಿರ್ಗಳು ಭಾಗಿಯಾಗಿದ್ದರು. ಮಳೆಯಿಂದ ವಿದ್ಯಾರ್ಥಿಗಳು ಸಭಾಂಗಣದೊಳಗೆ ಬರಲು ಮುಂದಾದ ವೇಳೆ ನೂಕುನುಗ್ಗಲು ಉಂಟಾಗಿ ಕೆಲ ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
Four students were killed, and over 60 were injured in a stampede during Cochin university annual festival here on November 25 night, police said. Officials said that the stampede occurred before well known singer Nikita Gandhi was to perform for a musical festival in the open air auditorium of Cochin University of Science and Technology (CUSAT) here.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm