ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm