ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm