ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm