ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm