ಬ್ರೇಕಿಂಗ್ ನ್ಯೂಸ್
06-12-23 05:06 pm HK News Desk ದೇಶ - ವಿದೇಶ
ಲಕ್ನೋ, ಡಿ 06: ರೈಲ್ವೇಸ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ.
ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.
ಮಿರ್ಜಾಪುರದ ನಿವಾಸಿಯಾಗಿರುವ ಡಾ.ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು.
ಕಳೆದ ಭಾನುವಾರ ನೆರೆಹೊರೆಯವರಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಆ ಬಳಿಕ ಯಾರ ಕಣ್ಣಿಗೂ ಈ ಕುಟುಂಬ ಸದಸ್ಯರು ಕಾಣಲಿಲ್ಲ ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಹಾಗೂ ವೈದ್ಯರ ಸಹೋದ್ಯೋಗಿಗಳು ಮನೆಯ ಬಳಿ ಬಂದು ಬೆಲ್ ಮಾಡಿದ್ದಾರೆ ಆದರೆ ಮನೆಯ ಒಳಗಿಂದ ಯಾವುದೇ ಸದ್ದು ಕೇಳಿಸಲಿಲ್ಲ ಆದರೆ ಮನೆಯ ಒಳಗಿನಿಂದ ಬಾಗಿಲು ಹಾಕಿತ್ತು ಇದನ್ನು ಕಂಡು ಸಂಶಗೊಂಡ ಸಹೋದ್ಯೋಗಿಗಳು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಒಳಗೆ ವೈದ್ಯ, ಅವರ ಪತ್ನಿ ಅರ್ಚನಾ, ಮಗಳು ಆದಿವಾ (12) ಮತ್ತು ಮಗ ಆರವ್ (40) ಅವರ ಮೃತದೇಹ ಪತ್ತೆಯಾಗಿದೆ.
ಆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತದೇಹದ ಬಳಿ ಸುತ್ತಿಗೆ, ರಕ್ತದ ಕಲೆಗಳು ಮತ್ತು ಡ್ರಗ್ ಇಂಜೆಕ್ಷನ್ಗಳು ಪತ್ತೆಯಾಗಿದ್ದು ಪೊಲೀಸರ ಮಾಹಿತಿಯಂತೆ ವೈದ್ಯರು ಮೊದಲು ಮಕ್ಕಳು ಹಾಗೂ ಪತ್ನಿಗೆ ಅಮಲು ಬರುವ ಇಂಜೆಕ್ಷನ್ ನೀಡಿ ಬಳಿಕ ಸುತ್ತಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರಬೇಕು ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ರಾಯ್ ಬರೇಲಿ ಎಸ್ಪಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.
ನೆರೆಹೊರೆಯವರ ಪ್ರಕಾರ ಕೌಟುಂಬಿಕ ಸಮಸ್ಯೆ ಇದ್ದಿರಬಹುದು ಆದರೆ ರೋಗಿಗಳಿಗೆ ಮತ್ತು ನೆರೆಹೊರೆಯವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು ಕೆಲವೊಮ್ಮೆ ಕೋಪಗೊಳ್ಳುತ್ತಿದ್ದರು ಖಿನ್ನತೆಗೆ ಒಳಗಾಗುತ್ತಿದ್ದರು ಇದೇ ಖಿನ್ನತೆಯಿಂದ ಈ ರೀತಿಯ ಕೃತ್ಯ ಎಸಗಿರಲು ಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
A doctor in Uttar Pradesh's Rae Bareli killed his wife and two children, and later died by suicide. The incident was reported late on Tuesday, when the doctor, an eye specialist at the Modern Rail Coach Factory Hospital, and his family did not respond to phone calls by one of his colleagues.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm