ಬ್ರೇಕಿಂಗ್ ನ್ಯೂಸ್
06-12-23 05:06 pm HK News Desk ದೇಶ - ವಿದೇಶ
ಲಕ್ನೋ, ಡಿ 06: ರೈಲ್ವೇಸ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ.
ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.
ಮಿರ್ಜಾಪುರದ ನಿವಾಸಿಯಾಗಿರುವ ಡಾ.ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು.
ಕಳೆದ ಭಾನುವಾರ ನೆರೆಹೊರೆಯವರಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಆ ಬಳಿಕ ಯಾರ ಕಣ್ಣಿಗೂ ಈ ಕುಟುಂಬ ಸದಸ್ಯರು ಕಾಣಲಿಲ್ಲ ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಹಾಗೂ ವೈದ್ಯರ ಸಹೋದ್ಯೋಗಿಗಳು ಮನೆಯ ಬಳಿ ಬಂದು ಬೆಲ್ ಮಾಡಿದ್ದಾರೆ ಆದರೆ ಮನೆಯ ಒಳಗಿಂದ ಯಾವುದೇ ಸದ್ದು ಕೇಳಿಸಲಿಲ್ಲ ಆದರೆ ಮನೆಯ ಒಳಗಿನಿಂದ ಬಾಗಿಲು ಹಾಕಿತ್ತು ಇದನ್ನು ಕಂಡು ಸಂಶಗೊಂಡ ಸಹೋದ್ಯೋಗಿಗಳು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಒಳಗೆ ವೈದ್ಯ, ಅವರ ಪತ್ನಿ ಅರ್ಚನಾ, ಮಗಳು ಆದಿವಾ (12) ಮತ್ತು ಮಗ ಆರವ್ (40) ಅವರ ಮೃತದೇಹ ಪತ್ತೆಯಾಗಿದೆ.
ಆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತದೇಹದ ಬಳಿ ಸುತ್ತಿಗೆ, ರಕ್ತದ ಕಲೆಗಳು ಮತ್ತು ಡ್ರಗ್ ಇಂಜೆಕ್ಷನ್ಗಳು ಪತ್ತೆಯಾಗಿದ್ದು ಪೊಲೀಸರ ಮಾಹಿತಿಯಂತೆ ವೈದ್ಯರು ಮೊದಲು ಮಕ್ಕಳು ಹಾಗೂ ಪತ್ನಿಗೆ ಅಮಲು ಬರುವ ಇಂಜೆಕ್ಷನ್ ನೀಡಿ ಬಳಿಕ ಸುತ್ತಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರಬೇಕು ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ರಾಯ್ ಬರೇಲಿ ಎಸ್ಪಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.
ನೆರೆಹೊರೆಯವರ ಪ್ರಕಾರ ಕೌಟುಂಬಿಕ ಸಮಸ್ಯೆ ಇದ್ದಿರಬಹುದು ಆದರೆ ರೋಗಿಗಳಿಗೆ ಮತ್ತು ನೆರೆಹೊರೆಯವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು ಕೆಲವೊಮ್ಮೆ ಕೋಪಗೊಳ್ಳುತ್ತಿದ್ದರು ಖಿನ್ನತೆಗೆ ಒಳಗಾಗುತ್ತಿದ್ದರು ಇದೇ ಖಿನ್ನತೆಯಿಂದ ಈ ರೀತಿಯ ಕೃತ್ಯ ಎಸಗಿರಲು ಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
A doctor in Uttar Pradesh's Rae Bareli killed his wife and two children, and later died by suicide. The incident was reported late on Tuesday, when the doctor, an eye specialist at the Modern Rail Coach Factory Hospital, and his family did not respond to phone calls by one of his colleagues.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm