ಬ್ರೇಕಿಂಗ್ ನ್ಯೂಸ್
06-12-23 06:27 pm HK News Desk ದೇಶ - ವಿದೇಶ
ನವದೆಹಲಿ, ಡಿ.6: ಪಾಕಿಸ್ತಾನದಲ್ಲಿ ಮತ್ತೊಬ್ಬ ನಟೋರಿಯಸ್ ಉಗ್ರನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಸಾಯಿಸಿದ್ದಾರೆ. 2015ರ ಜಮ್ಮು ಕಾಶ್ಮೀರದ ಉಧಂಪುರ್ ದಾಳಿಯ ರೂವಾರಿ, ಲಷ್ಕರ್ ಇ- ತೈಬಾ ಸಂಘಟನೆಯ ಉಗ್ರ ಹನ್ಝ್ಲಾ ಅದ್ನಾನ್ ಎಂಬಾತ ಅಪರಿಚಿತರ ಗುಂಡೇಟು ಬಿದ್ದು ಕೊಲೆಯಾಗಿದ್ದಾನೆ.
ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನಿಕಟವರ್ತಿಯಾಗಿದ್ದ ಅದ್ನಾನ್ ಡಿ.2 ಮತ್ತು 3ರ ನಡುವಿನ ರಾತ್ರಿ ವೇಳೆ ತನ್ನ ಮನೆಯಲ್ಲಿದ್ದಾಗಲೇ ಬಂದೂಕುಧಾರಿಗಳ ಗುಂಡೇಟಿಗೆ ಒಳಗಾಗಿದ್ದಾನೆ, ನಾಲ್ಕು ಗುಂಡುಗಳು ಆತನ ದೇಹ ಸೇರಿದ್ದವು. ಗಂಭೀರ ಸ್ಥಿತಿಯಲ್ಲಿದ್ದ ಹನ್ಝ್ಲಾನನ್ನು ಪಾಕಿಸ್ತಾನದ ಮಿಲಿಟರಿ ರಹಸ್ಯವಾಗಿ ಆಸ್ಪತ್ರೆಗೆ ಸೇರಿಸಿತ್ತು. ಡಿ.5ರಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಇತ್ತೀಚೆಗೆ ರಾವಲ್ಪಿಂಡಿಯಿಂದ ಕರಾಚಿಯನ್ನು ಕಾರಸ್ಥಾನ ಮಾಡಿಕೊಂಡು ಲಷ್ಕರ್ ಉಗ್ರವಾದಿ ಕಾರ್ಯಾಚರಣೆಯನ್ನು ಅದ್ನಾನ್ ಮುಂದುವರಿಸಿದ್ದ.
2015ರ ಉಧಂಪುರ್ ದಾಳಿಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಮೃತಪಟ್ಟು 12 ಮಂದಿ ಯೋಧರು ಗಾಯಗೊಂಡಿದ್ದರು. 2016ರಲ್ಲಿ ಜಮ್ಮು ಕಾಶ್ಮೀರದ ಪಾಂಪೋರ್ ಏರಿಯಾದಲ್ಲಿ ಲಷ್ಕರ್ ಉಗ್ರರ ದಾಳಿಗೆ ಎಂಟು ಸಿಆರ್ ಪಿಎಫ್ ಯೋಧರು ಬಲಿಯಾಗಿದ್ದರು. ಇವರೆಡೂ ಕೃತ್ಯದ ಹಿಂದೆ ಉಗ್ರ ಹನ್ಝ್ಲಾ ಅದ್ನಾನ್ ಮಾಸ್ಟರ್ ಮೈಂಡ್ ಆಗಿದ್ದ ಅನ್ನುವುದನ್ನು ಎನ್ಐಎ ಅಧಿಕಾರಿಗಳ ತನಿಖೆಯಲ್ಲಿ ಪತ್ತೆ ಮಾಡಿದ್ದರು. ಡಿ.2ರಂದು ಐಎಸ್ಐ ಪರವಾಗಿ ಕೆಲಸ ಮಾಡುತ್ತಿದ್ದ ಖಲೀಸ್ತಾನಿ ಉಗ್ರನೊಬ್ಬ ಕರಾಚಿಯಲ್ಲಿ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ.
ಮತ್ತೊಬ್ಬ ಉಗ್ರವಾದಿಗೆ ಗುಂಡೇಟು
ಅಹ್ಲೇ ಸುನ್ನತ್ ವಾಲೇ ಜಮಾತ್ ಎನ್ನುವ ನಿಷೇಧಿತ ಸಂಘಟನೆಯ ಸ್ಥಳೀಯ ನಾಯಕನಾಗಿದ್ದ ಬಿಲಾಲ್ ಮುರ್ಶಿದ್ ಎಂಬಾತನಿಗೆ ಡಿ.6ರಂದು ಬೈಕಿನಲ್ಲಿ ಬಂದಿದ್ದ ಇಬ್ಬರು ಗುಂಡು ಹಾರಿಸಿದ್ದಾರೆ. ಬಿಲಾಲ್ ಮುರ್ಶಿದ್ ದೇಹಕ್ಕೆ ಐದಾರು ಗುಂಡುಗಳು ಹೊಕ್ಕಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ. ಬಂದೂಕುಧಾರಿಗಳು ಬೈಕಿನಲ್ಲಿ ಬಂದು ಬಿಲಾಲನ್ನೇ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆಂದು ಪತ್ರಿಕೆ ಬರೆದಿದೆ.
Adnan Ahmed, considered to be a close aide of Lashkar-e-Taiba (LeT) founder and 26/11 Mumbai terror attacks mastermind Hafiz Saeed, was shot dead in Pakistan’s Karachi city.
13-09-25 08:46 pm
Bangalore Correspondent
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm