ಬ್ರೇಕಿಂಗ್ ನ್ಯೂಸ್
08-12-23 01:50 pm HK News Desk ದೇಶ - ವಿದೇಶ
ನವದೆಹಲಿ, ಡಿ.8; ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಐದು ದಿನಗಳ ನಂತರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಪಕ್ಷದ ವೀಕ್ಷಕರನ್ನು ನೇಮಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ ಮತ್ತು ಸರೋಜ್ ಪಾಂಡೆ ಅವರನ್ನು ರಾಜಸ್ಥಾನದ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಮಧ್ಯಪ್ರದೇಶಕ್ಕೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರನ್ನು ನೇಮಿಸಲಾಗಿದೆ. ಛತ್ತೀಸ್ಗಢದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಸರ್ಬಾನಂದ ಸೋನೋವಾಲ್ ಮತ್ತು ದುಷ್ಯಂತ್ ಗೌತಮ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.






ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಯಲ್ಲಿ ಹೊಸಬರಿಗೆ ಬಿಜೆಪಿ ಮಣೆ ಹಾಕಲಿದೆ ಎನ್ನಲಾಗಿದೆ. ಭವಿಷ್ಯದ ನಾಯಕರನ್ನು ರೂಪಿಸಲು ಇದು ಸಕಾಲ ಎಂದು ಭಾವಿಸಿರುವ ಕೇಂದ್ರ ನಾಯಕರು, ಮೂರು ರಾಜ್ಯಗಳಲ್ಲಿ ಹಳಬರಿಗೆ ಕೊಕ್ ಕೊಟ್ಟು ಹೊಸ ಮುಖಗಳಿಗೆ ಅವಕಾಶ ನೀಡಲಿದ್ದಾರೆ. ಇದಕ್ಕಾಗಿ ಈ ರಾಜ್ಯಗಳಿಗೆ ಬರಲಿರುವ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಹೊಸ ಮುಖಕ್ಕೆ ಅವಕಾಶ ನೀಡುವ ಬಗ್ಗೆ ಶಾಸಕರ ಮನವೊಲಿಕೆ ಮಾಡಲಿದ್ದಾರೆ.
ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಕೈಯಲ್ಲಿದ್ದ ಅಧಿಕಾರವನ್ನು ಬಿಜೆಪಿ ಕಸಿದುಕೊಂಡಿದ್ದು ಗೆಲುವಿನ ಉತ್ಸಾಹದಲ್ಲಿದೆ. ಆದರೆ ಪ್ರಾದೇಶಿಕವಾಗಿ ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವರಿದ್ದು ಅವರನ್ನು ಮನವೊಲಿಸುವ ಕೆಲಸವೂ ಆಗಬೇಕಾಗಿದೆ. ಬಿಜೆಪಿ ಮಧ್ಯ ಭಾರತದ ಹಿಂದಿ ಹಾರ್ಟ್ ಲ್ಯಾಂಡ್ ನಲ್ಲಿ ಹಿಡಿತ ಬಿಗಿಗೊಳಿಸಿರುವುದು ಈ ಚುನಾವಣೆಯಲ್ಲಿ ಸ್ಪಷ್ಟವಾಗಿದ್ದು ಲೋಕಸಭೆಗೆ ತಯಾರಾಗುತ್ತಿರುವ ಬಿಜೆಪಿಗೆ ಟಾನಿಕ್ ಸಿಕ್ಕಂತಾಗಿದೆ.
Five days after the declaration of Assembly election results in four states, the Bharatiya Janata Party on Friday announced the appointment of observers for three states –Rajasthan, Madhya Pradesh and Chhattisgarh– where the party emerged victorious in the recently-concluded Assembly elections.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm