ಬ್ರೇಕಿಂಗ್ ನ್ಯೂಸ್
11-12-23 07:34 pm HK News Desk ದೇಶ - ವಿದೇಶ
ತಿರುವನಂತಪುರ, ಡಿ.11: ಲವ್ ಜಿಹಾದ್ ಕಾರಣಕ್ಕೆ ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಕೇರಳದ ಅಖಿಲಾ ಅಲಿಯಾಸ್ ಹದಿಯಾ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾಳೆ. ತನ್ನ ಮಗಳು ನಾಪತ್ತೆಯಾಗಿದ್ದಾಳೆ, ಆಕೆಯನ್ನು ಹುಡುಕಿ ಕೊಡಬೇಕೆಂದು ತಂದೆ ಅಶೋಕನ್ ಎರಡನೇ ಬಾರಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರೆ, ಇತ್ತ ವಿಡಿಯೋ ಬಿಡುಗಡೆ ಮಾಡಿರುವ ಹದಿಯಾ ತಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾಳೆ.
ಅಶೋಕನ್ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಹದಿಯಾ ವಿಡಿಯೋ ಬಿಡುಗಡೆ ಮಾಡಿದ್ದು, ತನ್ನ ಖಾಸಗಿತನಕ್ಕೆ ಯಾಕೆ ಭಂಗ ತರುತ್ತೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ನಮ್ಮ ಸಂವಿಧಾನವೇ ಪ್ರಾಯ ಪ್ರಬುದ್ಧರಿಗೆ ಮದುವೆ ಮತ್ತು ಖಾಸಗಿ ಸಂಬಂಧಗಳ ಬಗ್ಗೆ ನಿರ್ಧರಿಸುವ ಹಕ್ಕನ್ನು ನೀಡಿದೆ. ಸಮಾಜದಲ್ಲಿ ಎಲ್ಲರೂ ಈ ಹಕ್ಕನ್ನು ಅನುಭವಿಸುತ್ತಿರುವಾಗ ನನ್ನ ವಿಚಾರದಲ್ಲಿ ಮಾತ್ರ ಯಾಕೆ ಪ್ರಶ್ನೆಗಳು ಬರುತ್ತವೆ. ಸಮಾಜ ನನ್ನ ಬಗ್ಗೆ ಯಾಕೆ ಮತ್ತೆ ಮತ್ತೆ ವದಂತಿಗಳನ್ನು ಹಬ್ಬಿಸುತ್ತಿವೆ ಎನ್ನುವುದು ತಿಳಿಯುತ್ತಿಲ್ಲ. ನಾನು ನನ್ನ ಬದುಕಿನ ಬಗ್ಗೆ ನಿರ್ಧರಿಸಲು ಪ್ರಬುದ್ಧಳಿದ್ದೇನೆ ಎಂದು ಹೇಳಿಕೆ ನೀಡಿದ್ದಾಳೆ.
2016ರಲ್ಲಿ ಕೊಯಮತ್ತೂರಿನ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿದ್ದ ಕೊಟ್ಟಾಯಂ ಮೂಲದ ಅಖಿಲಾ ಬಳಿಕ ಇಸ್ಲಾಂಗೆ ಮತಾಂತರಗೊಂಡು ತನ್ನ ಸಹಪಾಠಿ ಶಾಹೀನ್ ಸಫೀನ್ ಎಂಬಾತನನ್ನು ಮದುವೆಯಾಗಿದ್ದಳು. ಈ ಕುರಿತ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆನಂತರ, ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಎನ್ಐಎ ತನಿಖೆಯನ್ನೂ ನಡೆಸಿದ್ದು, ಇದರಲ್ಲಿ ಯಾವುದೇ ಲವ್ ಜಿಹಾದ್ ಕೃತ್ಯ ಕಂಡುಬಂದಿಲ್ಲ ಎಂದು ರಿಪೋರ್ಟ್ ನೀಡಿತ್ತು. ಅಲ್ಲದೆ, ಹದಿಯಾ ಎಂದು ಬದಲಾಗಿದ್ದ ಅಖಿಲಾ ತನ್ನ ಮದುವೆ, ಖಾಸಗಿತನದ ಬಗ್ಗೆ ನಿರ್ಧರಿಸಲು ಸ್ವತಂತ್ರಳಿದ್ದೇನೆ ಎಂದು ಹೇಳಿಕೆ ನೀಡಿ, ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ್ದಳು. ಕೇರಳದಲ್ಲಿ ಲವ್ ಜಿಹಾದ್ ಕೃತ್ಯಗಳು ಹೆಚ್ಚುತ್ತಿವೆ ಎನ್ನುವ ಆರೋಪಕ್ಕೆ ಈಕೆಯ ಹೇಳಿಕೆ ದೊಡ್ಡ ಹಿನ್ನಡೆಯಾಗಿತ್ತು. ಆಕೆಯ ಹೇಳಿಕೆಯಂತೆ, ಗಂಡನ ಜೊತೆ ಬದುಕಲು ಸುಪ್ರೀಂ ಕೋರ್ಟ್ ಆದೇಶ ಮಾಡಿತ್ತು.
ಕೇರಳ ಹೈಕೋರ್ಟ್ ಜಟಾಪಟಿ, ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕವೂ ಹದಿಯಾ ತನ್ನ ಪಟ್ಟು ಸಡಿಲಿಸಿರಲಿಲ್ಲ. ತಾನು ಪ್ರೀತಿಸಿದ್ದ ಶಫೀನ್ ಜಹಾನ್ ಜೊತೆಗೆ ಬದುಕಲು ಬಿಡಬೇಕೆಂದು ಕೇಳಿಕೊಂಡಿದ್ದಳು. ಅದರಂತೆ, 2019ರಲ್ಲಿ ಮಲಪ್ಪುರಂನಲ್ಲಿ ತನ್ನದೇ ಹೋಮಿಯೋಪತಿಕ್ ಕ್ಲಿನಿಕ್ ತೆರೆದು ಬದುಕು ಆರಂಭಿಸಿದ್ದಳು. 2016ರಲ್ಲಿಯೂ ತಂದೆ ಅಶೋಕನ್ ತನ್ನ ಮಗಳನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ, ಲವ್ ಜಿಹಾದ್ ಕೃತ್ಯದ ಸಂಶಯದಲ್ಲಿ ಹೈಕೋರ್ಟಿಗೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದರು. ಆದರೆ ಲವ್ ಜಿಹಾದ್ ಆರೋಪದ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿ ಬಿದ್ದು ಹೋಗಿದ್ದರಿಂದ ಹೈಕೋರ್ಟ್ ಕೇಸು ಕೂಡ ವಜಾಗೊಂಡಿತ್ತು. ಇತ್ತೀಚೆಗೆ ಹಾದಿಯಾ ತನ್ನ ಪತಿ ಶಫೀನ್ ಗೆ ಡೈವರ್ಸ್ ನೀಡಿದ್ದಾಳೆ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೆ, ಆಕೆ ಮತ್ತೊಬ್ಬ ಮುಸ್ಲಿಂ ಯುವಕನನ್ನು ಮರು ಮದುವೆಯಾಗಿದ್ದಾಳೆ ಎಂದೂ ಹೇಳಲಾಗಿತ್ತು.
ಈಗ ಮಾಧ್ಯಮಕ್ಕೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹದಿಯಾ ತನ್ನ ಎರಡನೇ ಮದುವೆ ಬಗ್ಗೆಯೂ ಹೇಳಿಕೊಂಡಿದ್ದು, ನಾನು ಮುಸ್ಲಿಂ ಆಗಿ ಸುಖವಾಗಿದ್ದೇನೆ. ಮೊದಲ ಗಂಡನಿಗೆ ಡೈವರ್ಸ್ ನೀಡಿದ್ದೇನೆ. ಮತ್ತೊಬ್ಬ ಮುಸ್ಲಿಂ ಯುವಕನನ್ನು ಎರಡನೇ ಮದುವೆಯಾಗಿದ್ದೇನೆ. ಈ ವಿಚಾರ ತನ್ನ ಹೆತ್ತವರಿಗೂ ತಿಳಿದಿದೆ ಎಂದು ಹೇಳಿದ್ದಾಳೆ. ನನ್ನ ಹೆತ್ತವರು ನನ್ನೊಂದಿಗೆ ನಿರಂತರ ಸಂಪರ್ಕದಲ್ಲೇ ಇದ್ದರು. ಆದರೆ ತಂದೆಯನ್ನು ಸಂಘ ಪರಿವಾರದ ಕೆಲವೊಂದು ಶಕ್ತಿಗಳು ತಮಗೆ ಬೇಕಾದ ರೀತಿ ಬಳಸಿಕೊಳ್ಳುತ್ತಿವೆ ಎಂದೂ ಹದಿಯಾ ಇತ್ತೀಚೆಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಳು. ಅಶೋಕನ್ ಎರಡನೇ ಬಾರಿಗೆ ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣದ ವಿಚಾರಣೆ ಇನ್ನೂ ನಡೆದಿಲ್ಲ. ಇದರ ನಡುವೆ, ಆಕೆಯ ಹೇಳಿಕೆಯ ವಿಡಿಯೋ ಬಂದಿದ್ದು, ಕೇರಳದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
whose conversion to Islam and marriage to a Muslim in 2016 triggered a heated debate on "love jihad" in Kerala – has divorced him and married another Muslim man.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm