ಬ್ರೇಕಿಂಗ್ ನ್ಯೂಸ್
12-12-23 06:06 pm HK News Desk ದೇಶ - ವಿದೇಶ
ಜೈಪುರ, ಡಿ.12: ಬಿಜೆಪಿ ಹೈಕಮಾಂಡ್ ರಾಜಸ್ಥಾನ ಪಾಲಿಗೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಕಳೆದೊಂದು ವಾರದಿಂದ ನಡೆಸುತ್ತಿದ್ದ ಹೊಯ್ದಾಟಕ್ಕೆ ತೆರೆಹಾಕಿದ್ದು, ಮೊದಲ ಬಾರಿಗೆ ಶಾಸಕನಾಗಿರುವ ಭಜನ್ ಲಾಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.
ಮಂಗಳವಾರ ನಡೆದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಅವರೇ ಭಜನಲಾಲ್ ಅವರ ಹೆಸರನ್ನು ಸೂಚಿಸಿದ್ದಾರೆ. ಪಕ್ಷದ ಸಭೆಯಲ್ಲಿ ಕೇಂದ್ರದಿಂದ ವೀಕ್ಷಕರಾಗಿ ಬಂದಿದ್ದ ರಾಜನಾಥ್ ಸಿಂಗ್, ಭಜನ್ ಲಾಲ್ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಘೋಷಣೆ ಮಾಡಿದ್ದಾರೆ. ಅಲ್ಲದೆ, ರಜಪೂತ ವಂಶಸ್ಥೆ ದಿಯಾ ಕುಮಾರಿ ಮತ್ತು ಪರಿಶಿಷ್ಟ ಜಾತಿಯ ಪ್ರೇಮಚಂದ್ ಬೈರ್ವಾ ಅವರನ್ನು ಡಿಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.




ಮುಖ್ಯಮಂತ್ರಿ ಸ್ಥಾನಕ್ಕೆ ವಸುಂಧರಾ ರಾಜೇ, ಗಜೇಂದ್ರ ಶೇಖಾವತಿ, ಮಹಾಂತ ಬಾಲಕನಾಥ್ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಈ ಬಾರಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಭಜನಲಾಲ್ ಹೆಸರು ಸಿಎಂ ಸ್ಥಾನದ ರೇಸಿನಲ್ಲಿ ಇರಲಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ನಿಕಟವರ್ತಿ ಮತ್ತು ರಾಜಸ್ಥಾನದಲ್ಲಿ ನಾಲ್ಕು ಬಾರಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಭಜನ್ ಲಾಲ್ ಅವರನ್ನು ಅಚ್ಚರಿಯ ಆಯ್ಕೆಯಾಗಿ ಘೋಷಣೆ ಮಾಡಲಾಗಿದೆ.
ಬ್ರಾಹ್ಮಣ ಸಮುದಾಯದ ಭಜನಲಾಲ್ ಶರ್ಮಾ ಈ ಬಾರಿಯ ಚುನಾವಣೆಯಲ್ಲಿ ಸಂಗನೇರ್ ಕ್ಷೇತ್ರದಿಂದ 48 ಸಾವಿರ ಮತಗಳ ಅಂತರದಿಂದ ಗೆದ್ದು ಗಮನಸೆಳೆದಿದ್ದರು. ಭಜನಲಾಲ್ ಅವರಿಗೆ 1,45,162 ಮತಗಳು ಬಿದ್ದಿದ್ದರೆ, ಪ್ರತಿಸ್ಪರ್ಧಿ ಕಾಂಗ್ರೆಸಿನ ಪುಷ್ಪೇಂದ್ರ ಭಾರದ್ವಾಜ್ 97081 ಮತಗಳನ್ನು ಪಡೆದಿದ್ದರು. ಭರತ್ ಪುರ ಮೂಲದ ಭಜನಲಾಲ್, ಬ್ರಾಹ್ಮಣ ಮತಗಳೇ ಹೆಚ್ಚಿರುವ ಸಂಗನೇರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಭಜನಲಾಲ್ ಆರೆಸ್ಸೆಸ್ ಮತ್ತು ಎಬಿವಿಪಿ ಮೂಲಕ ರಾಜಕೀಯ ಪ್ರವೇಶ ಮಾಡಿದ್ದು ಪಕ್ಷದಲ್ಲಿ ಸುದೀರ್ಘ ಕಾಲದಲ್ಲಿ ಸಕ್ರಿಯರಾಗಿದ್ದಾರೆ.
The Bharatiya Janata Party on Tuesday selected Bhajan Lal Sharma as the new chief minister of Rajasthan. Former chief minister Vasundhara Raje, who was among the frontrunners for the post, reportedly proposed Sharma's name in the meeting of BJP's legislature party. The Bharatiya Janata Party has named Diya Kumari and Prem Chand Bairwa as Sharma's deputy chief ministers.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm