ಬ್ರೇಕಿಂಗ್ ನ್ಯೂಸ್
14-12-23 05:55 pm HK News Desk ದೇಶ - ವಿದೇಶ
ಲಕ್ನೋ, ಡಿ.14: ಶ್ರೀಕೃಷ್ಣ ಜನ್ಮಭೂಮಿಯಲ್ಲಿರುವ ಮಥುರಾ ದೇವಸ್ಥಾನದ ಆವರಣದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸರ್ವೇ ನಡೆಸುವುದಕ್ಕೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. ಕೋರ್ಟ್ ನೇಮಕ ಮಾಡುವ ವಕೀಲರ ಆಯೋಗದ ಮೇಲ್ವಿಚಾರಣೆಯಲ್ಲಿ ಸರ್ವೆ ನಡೆಯಲಿದೆ.
ತನಿಖಾ ಆಯೋಗದ ಮೂಲಕ ಶಾಹಿ ಈದ್ಗಾ ಮಸೀದಿಯಲ್ಲಿ ಸರ್ವೆ ನಡೆಸಬೇಕೆಂಬ ನಮ್ಮ ಅರ್ಜಿಯನ್ನು ಕೋರ್ಟ್ ಪರಿಗಣಿಸಿದೆ. ಯಾವ ರೀತಿಯ ಸರ್ವೆ ಎನ್ನುವ ಬಗ್ಗೆ ಕೋರ್ಟ್ ಡಿ.18ರಂದು ನಿರ್ಧರಿಸಲಿದೆ ಎಂದು ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನ ಸಮಿತಿಯ ಪರ ವಕೀಲ ವಿಷ್ಣುಶಂಕರ್ ಜೈನ್ ಹೇಳಿದ್ದಾರೆ. ಶಾಹಿ ಈದ್ಗಾ ಮಸೀದಿ ಪರ ವಕೀಲರ ವಾದವನ್ನು ಕೋರ್ಟ್ ನಿರಾಕರಿಸಿದೆ ಎಂದವರು ತಿಳಿಸಿದ್ದಾರೆ.
ಶಾಹಿ ಈದ್ಗಾ ಮಸೀ ದಿ ಕಟ್ಟಡದಲ್ಲಿ ಹಿಂದು ದೇಗುಲದ ಕುರುಹುಗಳಿವೆ. ಮೇಲ್ನೋಟಕ್ಕೆ ದೇವಸ್ಥಾನ ಅನ್ನುವುದನ್ನು ಹೇಳುವ ಹಲವಾರು ಸಂಕೇತಗಳಿವೆ. ಇದಕ್ಕಾಗಿ ಕೋರ್ಟ್ ಮೂಲಕ ತನಿಖಾ ಆಯೋಗ ನೇಮಕ ಮಾಡಬೇಕು ಅನ್ನುವುದು ನಮ್ಮ ಬೇಡಿಕೆಯಾಗಿತ್ತು. ಇದೀಗ ಸರ್ವೆಗೆ ಅನುಮತಿ ನೀಡುವ ನಿರ್ಧಾರ ಮಹತ್ವದ ಮೈಲಿಗಲ್ಲು ಎಂದು ವಕೀಲ ವಿಷ್ಣು ಜೈನ್ ಅಭಿಪ್ರಾಯ ಪಟ್ಟಿದ್ದಾರೆ.
ಕೃಷ್ಣನ ಜನ್ಮಭೂಮಿಯಲ್ಲಿ 13.37 ಎಕ್ರೆ ಜಾಗದಲ್ಲಿದ್ದ ದೇವಸ್ಥಾನವನ್ನು ಕೆಡವಿ ಔರಂಗಜೇಬನ ಕಾಲದಲ್ಲಿ ಶಾಹಿ ಈದ್ಗಾ ಮಸೀದಿಯನ್ನು ಕಟ್ಟಡಲಾಗಿತ್ತು ಎನ್ನುವುದು ಹಿಂದುಗಳ ವಾದ. ಈ ಕುರಿತ ಪ್ರಮುಖ ದಾವೆ ಹೈಕೋರ್ಟಿನಲ್ಲಿ ವಿಚಾರಣೆ ಹಂತದಲ್ಲಿದೆ. ಅಲ್ಲಿನ ಭೂಮಿ ಯಾರದ್ದು ಎನ್ನುವುದರ ಬಗ್ಗೆ 17 ಅರ್ಜಿಗಳು ಹೈಕೋರ್ಟಿನಲ್ಲಿ ದಾಖಲಾಗಿವೆ. ಸರ್ವೆ ನಡೆಸಬೇಕು ಎನ್ನುವ ಅರ್ಜಿಯನ್ನು ಕಳೆದ ನವೆಂಬರ್ 16ರಂದು ವಿಚಾರಣೆ ನಡೆಸಿದ್ದು ತೀರ್ಪನ್ನು ಕಾಯ್ದಿರಿಸಲಾಗಿತ್ತು.
The Allahabad High Court on Thursday allowed a court-monitored survey of the Shahi Idgah premises adjoining the Krishna Janmabhoomi temple in Mathura. The court agreed to the appointment of an advocate commissioner to oversee the survey of the mosque, which the petitioners claim holds signs suggesting that it was a Hindu temple once. The order on the Krishna Janmabhoomi-Shahi Idgah issue is the second temple-mosque dispute in which the high court has given its nod to a survey over the past months. Watch the video for more.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm