ಬ್ರೇಕಿಂಗ್ ನ್ಯೂಸ್
14-12-23 06:15 pm HK News Desk ದೇಶ - ವಿದೇಶ
ನವದೆಹಲಿ, ಡಿ.14: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸಿಡಿಸಿ ಭದ್ರತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದೇ ಘಟನೆ ನಡೆದಿದ್ದು ದೇಶಾದ್ಯಂತ ತೀವ್ರ ಖಂಡನೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಸಂಸತ್ತಿನ ಹೊರಗೆ ಹಲವು ದಿನಗಳಿಂದ ಪೂರ್ವಾಭ್ಯಾಸ ನಡೆಸಿದ್ದರು. ಎಲ್ಲಾ ಆರೋಪಿಗಳು 'ಭಗತ್ ಸಿಂಗ್ ಫ್ಯಾನ್ ಕ್ಲಬ್' ಎಂಬ ಸಾಮಾಜಿಕ ಮಾಧ್ಯಮ ಪುಟದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಉಲ್ಲೇಖಿಸಿವೆ.
ಸುಮಾರು ಒಂದೂವರೆ ವರ್ಷಗಳ ಹಿಂದೆ ಎಲ್ಲರೂ ಮೈಸೂರಿನಲ್ಲಿ ಭೇಟಿಯಾಗಿದ್ದಾರೆ. ಜುಲೈನಲ್ಲಿ ಸಾಗರ್ ಲಕ್ನೋದಿಂದ ಬಂದಿದ್ದ. ಆದರೆ ಸಂಸತ್ ಭವನವನ್ನು ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ 10 ರಂದು ಎಲ್ಲರೂ ತಮ್ಮ ತಮ್ಮ ರಾಜ್ಯಗಳಿಂದ ದೆಹಲಿ ತಲುಪಿದ್ದರು.
ನಂತರ ಇಂಡಿಯಾ ಗೇಟ್ ಬಳಿ ಒಟ್ಟು ಸೇರಿ ಬಣ್ಣದ ಪಟಾಕಿಗಳನ್ನು ಖರೀದಿಸಿದ್ದರು ಎಂದು ಮೂಲಗಳು ತಿಳಿಸಿವೆ. ಗೃಹ ವ್ಯವಹಾರಗಳ ಸಚಿವಾಲಯ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಸಿಆರ್ಪಿಎಫ್ ಡಿಜಿ ಅನೀಶ್ ದಯಾಳ್ ಸಿಂಗ್ ಅವರ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳು ಮತ್ತು ತಜ್ಞರನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿದ ಎಂದು ಗೃಹ ಸಚಿವಾಲಯ ತಿಳಿಸಿದೆ.
ಭದ್ರತಾ ಲೋಪ ಘಟನೆ ಬಳಿಕ ಹೊಸ ಕಟ್ಟಡವನ್ನು ಪ್ರವೇಶಿಸಲು ತಮ್ಮ 'ಸ್ಮಾರ್ಟ್ ಕಾರ್ಡ್'ಗಳನ್ನು ಸಿದ್ಧಪಡಿಸುವಂತೆ ಲೋಕಸಭೆಯ ಸೆಕ್ರೆಟರಿಯೇಟ್ ಬುಧವಾರ ಸಂಸದರಿಗೆ ಸೂಚಿಸಿದೆ. ಕಟ್ಟಡದ ಗೇಟ್, ಲೋಕಸಭೆ ಮತ್ತು ರಾಜ್ಯಸಭೆಯ ಲಾಬಿಗಳು ಮತ್ತು ಇತರ ಕೆಲವು ಸ್ಥಳಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಯ ಸಹಾಯದಿಂದ ಸಂಸತ್ ಭವನಕ್ಕೆ ಪ್ರವೇಶ ನೀಡಲಾಗುತ್ತಿದೆ. ಸಂಸತ್ತು ಭವನ ಹೊರಗೆ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಪೊಲೀಸರು ಆವರಣ ಪ್ರವೇಶಿಸುವ ಪ್ರತಿ ವಾಹನಗಳನ್ನು ತಪಾಸಣೆ ಮಾಡಿ ಒಳಗೆ ಕಳುಹಿಸುತ್ತಿದ್ದಾರೆ.
A shocking incident happened in the Parliament on Wednesday wherein two people jumped into the Lok Sabha chamber from the public gallery during Zero Hour, released yellow gas from canisters, and shouted slogans before being overpowered by the MPs.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm