ಬ್ರೇಕಿಂಗ್ ನ್ಯೂಸ್
14-12-23 06:15 pm HK News Desk ದೇಶ - ವಿದೇಶ
ನವದೆಹಲಿ, ಡಿ.14: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸಿಡಿಸಿ ಭದ್ರತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದೇ ಘಟನೆ ನಡೆದಿದ್ದು ದೇಶಾದ್ಯಂತ ತೀವ್ರ ಖಂಡನೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಸಂಸತ್ತಿನ ಹೊರಗೆ ಹಲವು ದಿನಗಳಿಂದ ಪೂರ್ವಾಭ್ಯಾಸ ನಡೆಸಿದ್ದರು. ಎಲ್ಲಾ ಆರೋಪಿಗಳು 'ಭಗತ್ ಸಿಂಗ್ ಫ್ಯಾನ್ ಕ್ಲಬ್' ಎಂಬ ಸಾಮಾಜಿಕ ಮಾಧ್ಯಮ ಪುಟದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಉಲ್ಲೇಖಿಸಿವೆ.
ಸುಮಾರು ಒಂದೂವರೆ ವರ್ಷಗಳ ಹಿಂದೆ ಎಲ್ಲರೂ ಮೈಸೂರಿನಲ್ಲಿ ಭೇಟಿಯಾಗಿದ್ದಾರೆ. ಜುಲೈನಲ್ಲಿ ಸಾಗರ್ ಲಕ್ನೋದಿಂದ ಬಂದಿದ್ದ. ಆದರೆ ಸಂಸತ್ ಭವನವನ್ನು ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ 10 ರಂದು ಎಲ್ಲರೂ ತಮ್ಮ ತಮ್ಮ ರಾಜ್ಯಗಳಿಂದ ದೆಹಲಿ ತಲುಪಿದ್ದರು.
ನಂತರ ಇಂಡಿಯಾ ಗೇಟ್ ಬಳಿ ಒಟ್ಟು ಸೇರಿ ಬಣ್ಣದ ಪಟಾಕಿಗಳನ್ನು ಖರೀದಿಸಿದ್ದರು ಎಂದು ಮೂಲಗಳು ತಿಳಿಸಿವೆ. ಗೃಹ ವ್ಯವಹಾರಗಳ ಸಚಿವಾಲಯ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಸಿಆರ್ಪಿಎಫ್ ಡಿಜಿ ಅನೀಶ್ ದಯಾಳ್ ಸಿಂಗ್ ಅವರ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳು ಮತ್ತು ತಜ್ಞರನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿದ ಎಂದು ಗೃಹ ಸಚಿವಾಲಯ ತಿಳಿಸಿದೆ.
ಭದ್ರತಾ ಲೋಪ ಘಟನೆ ಬಳಿಕ ಹೊಸ ಕಟ್ಟಡವನ್ನು ಪ್ರವೇಶಿಸಲು ತಮ್ಮ 'ಸ್ಮಾರ್ಟ್ ಕಾರ್ಡ್'ಗಳನ್ನು ಸಿದ್ಧಪಡಿಸುವಂತೆ ಲೋಕಸಭೆಯ ಸೆಕ್ರೆಟರಿಯೇಟ್ ಬುಧವಾರ ಸಂಸದರಿಗೆ ಸೂಚಿಸಿದೆ. ಕಟ್ಟಡದ ಗೇಟ್, ಲೋಕಸಭೆ ಮತ್ತು ರಾಜ್ಯಸಭೆಯ ಲಾಬಿಗಳು ಮತ್ತು ಇತರ ಕೆಲವು ಸ್ಥಳಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಯ ಸಹಾಯದಿಂದ ಸಂಸತ್ ಭವನಕ್ಕೆ ಪ್ರವೇಶ ನೀಡಲಾಗುತ್ತಿದೆ. ಸಂಸತ್ತು ಭವನ ಹೊರಗೆ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಪೊಲೀಸರು ಆವರಣ ಪ್ರವೇಶಿಸುವ ಪ್ರತಿ ವಾಹನಗಳನ್ನು ತಪಾಸಣೆ ಮಾಡಿ ಒಳಗೆ ಕಳುಹಿಸುತ್ತಿದ್ದಾರೆ.
A shocking incident happened in the Parliament on Wednesday wherein two people jumped into the Lok Sabha chamber from the public gallery during Zero Hour, released yellow gas from canisters, and shouted slogans before being overpowered by the MPs.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm