ಬ್ರೇಕಿಂಗ್ ನ್ಯೂಸ್
15-12-23 07:31 pm HK News Desk ದೇಶ - ವಿದೇಶ
ಪಾಟ್ನಾ, ಡಿ 15: ವಿಚಾರಣಾಧೀನ ಕೈದಿಯೊಬ್ಬನನ್ನ ಕೋರ್ಟ್ ಆವರಣದಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ದಾನಪುರ ಕೋರ್ಟ್ ಕ್ಯಾಂಪಸ್ನಲ್ಲಿ ಬೇರ್ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದ ಕೈದಿಯನ್ನ ಪೊಲೀಸರ ಎದುರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊಲೆಯಾದ ವ್ಯಕ್ತಿಯನ್ನ ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ವಿಚಾರಣಾಧೀನ ಕೈದಿಯನ್ನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅವರನ್ನು ಯಾರು ಕಳುಹಿಸಿದ್ದಾರೆ, ಈ ಕೊಲೆಯ ಹಿಂದಿನ ಉದ್ದೇಶವೇನು ಅನ್ನೋ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ದಾಳಿಕೋರರು ಮುಜಾಫರ್ಪುರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಆರೋಪಿಗಳ ಬಳಿಯಿದ್ದ 4 ಬುಲೆಟ್ ಶೆಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದ್ರೆ ಎಷ್ಟು ಬುಲೆಟ್ಗಳನ್ನ ಹಾರಿಸಲಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
An undertrial prisoner, Abhishek alias Chhote Sarkar, was shot and killed inside the premises of the Danapur civil court in Bihar’s Patna district on Friday, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm