ಬ್ರೇಕಿಂಗ್ ನ್ಯೂಸ್
18-11-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 18: ಉತ್ತರ ಪ್ರದೇಶ, ಕರ್ನಾಟಕ ಸರಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ತರುವ ಬಗ್ಗೆ ಹೇಳಿಕೆ ನೀಡುತ್ತಿರುವಾಗಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಮಸೂದೆ ರೂಪ ತಳೆದಿದೆ. ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿ, ನಮ್ಮ ಸರಕಾರ ಕಾನೂನು ರೆಡಿ ಮಾಡಿದ್ದು, ಲವ್ ಜಿಹಾದ್ ಸಾಬೀತಾದರೆ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ವಿಧಿಸಲಾಗುವುದು ಎಂದಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿರುವ ನರೋತ್ತಮ್ ಮಿಶ್ರಾ, ಈ ಮಸೂದೆಗೆ ಧರ್ಮ ಸ್ವಾತಂತ್ರ್ಯ ವಿಧೇಯಕ್ ಎಂದು ಹೆಸರಿಡಲಾಗಿದೆ. ಬಲವಂತದ ಮದುವೆ ಮತ್ತು ಮತಾಂತರವನ್ನು ಹತ್ತಿಕ್ಕುವ ಸಲುವಾಗಿ ಈ ಕಾನೂನು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಕಾನೂನಿನಡಿ, ಬಲವಂತದ ಮದುವೆ, ಮತಾಂತರ ಮಾಡುವುದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಒಂದು ವೇಳೆ, ಈ ರೀತಿ ಮದುವೆಯಾದರೆ ಅವನ್ನು ಅನೂರ್ಜಿತ ವಿವಾಹ ಎಂದು ಘೋಷಿಸಲು ಕಾಯ್ದೆಯಡಿ ಅವಕಾಶ ಇರಲಿದೆ. ಒಂದು ಧರ್ಮದ ಹೆಣ್ಣನ್ನು ಆಮಿಷವೊಡ್ಡಿ ಅಥವಾ ಬಲವಂತವಾಗಿ ಮತಾಂತರಿಸುವುದು, ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಹಿಂಸಿಸುವುದು, ಅದಕ್ಕೆ ಪ್ರೋತ್ಸಾಹಿಸುವುದು ಇವೆಲ್ಲವೂ ಈ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದಿದ್ದಾರೆ.

ಒಂದು ವೇಳೆ, ಎರಡೂ ಧರ್ಮೀಯರು ಇಷ್ಟಪಟ್ಟು ಮದುವೆಯಾಗಲು ಬಯಸಿದರೆ ಒಂದು ತಿಂಗಳ ಮುನ್ನವೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು. ಅಂಥ ಸಂದರ್ಭದಲ್ಲಿ ಮಾತ್ರ ಅಂತರ್ ಧರ್ಮೀಯ ವಿವಾಹಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಅದು ಲವ್ ಜಿಹಾದ್ ಅಲ್ಲ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತ ಇರುವ ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಮಾತು ಕೇಳಿಬಂದಿದೆ. ಇದೀಗ ಮಧ್ಯಪ್ರದೇಶ ಸರಕಾರ ಕಾನೂನು ಬಗ್ಗೆ ರೂಪುರೇಷೆ ತಯಾರಿಸಿದ್ದು, ಡಿಸೆಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
Madhya Pradesh home minister Narottam Mishra has said that a ‘love jihad bill’, which includes five years of rigorous imprisonment for ‘violators’, will soon be introduced in the state assembly.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm