ಬ್ರೇಕಿಂಗ್ ನ್ಯೂಸ್
18-11-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 18: ಉತ್ತರ ಪ್ರದೇಶ, ಕರ್ನಾಟಕ ಸರಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ತರುವ ಬಗ್ಗೆ ಹೇಳಿಕೆ ನೀಡುತ್ತಿರುವಾಗಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಮಸೂದೆ ರೂಪ ತಳೆದಿದೆ. ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿ, ನಮ್ಮ ಸರಕಾರ ಕಾನೂನು ರೆಡಿ ಮಾಡಿದ್ದು, ಲವ್ ಜಿಹಾದ್ ಸಾಬೀತಾದರೆ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ವಿಧಿಸಲಾಗುವುದು ಎಂದಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿರುವ ನರೋತ್ತಮ್ ಮಿಶ್ರಾ, ಈ ಮಸೂದೆಗೆ ಧರ್ಮ ಸ್ವಾತಂತ್ರ್ಯ ವಿಧೇಯಕ್ ಎಂದು ಹೆಸರಿಡಲಾಗಿದೆ. ಬಲವಂತದ ಮದುವೆ ಮತ್ತು ಮತಾಂತರವನ್ನು ಹತ್ತಿಕ್ಕುವ ಸಲುವಾಗಿ ಈ ಕಾನೂನು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಕಾನೂನಿನಡಿ, ಬಲವಂತದ ಮದುವೆ, ಮತಾಂತರ ಮಾಡುವುದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಒಂದು ವೇಳೆ, ಈ ರೀತಿ ಮದುವೆಯಾದರೆ ಅವನ್ನು ಅನೂರ್ಜಿತ ವಿವಾಹ ಎಂದು ಘೋಷಿಸಲು ಕಾಯ್ದೆಯಡಿ ಅವಕಾಶ ಇರಲಿದೆ. ಒಂದು ಧರ್ಮದ ಹೆಣ್ಣನ್ನು ಆಮಿಷವೊಡ್ಡಿ ಅಥವಾ ಬಲವಂತವಾಗಿ ಮತಾಂತರಿಸುವುದು, ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಹಿಂಸಿಸುವುದು, ಅದಕ್ಕೆ ಪ್ರೋತ್ಸಾಹಿಸುವುದು ಇವೆಲ್ಲವೂ ಈ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದಿದ್ದಾರೆ.
ಒಂದು ವೇಳೆ, ಎರಡೂ ಧರ್ಮೀಯರು ಇಷ್ಟಪಟ್ಟು ಮದುವೆಯಾಗಲು ಬಯಸಿದರೆ ಒಂದು ತಿಂಗಳ ಮುನ್ನವೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು. ಅಂಥ ಸಂದರ್ಭದಲ್ಲಿ ಮಾತ್ರ ಅಂತರ್ ಧರ್ಮೀಯ ವಿವಾಹಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಅದು ಲವ್ ಜಿಹಾದ್ ಅಲ್ಲ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತ ಇರುವ ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಮಾತು ಕೇಳಿಬಂದಿದೆ. ಇದೀಗ ಮಧ್ಯಪ್ರದೇಶ ಸರಕಾರ ಕಾನೂನು ಬಗ್ಗೆ ರೂಪುರೇಷೆ ತಯಾರಿಸಿದ್ದು, ಡಿಸೆಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
Madhya Pradesh home minister Narottam Mishra has said that a ‘love jihad bill’, which includes five years of rigorous imprisonment for ‘violators’, will soon be introduced in the state assembly.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm