ಬ್ರೇಕಿಂಗ್ ನ್ಯೂಸ್
18-12-23 11:53 am HK News Desk ದೇಶ - ವಿದೇಶ
ಮುಂಬೈ, ಡಿ.18: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ, ಅಂಡರ್ ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ವಿಷ ಪ್ರಾಶನಕ್ಕೊಳಗಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಬಿಗಿ ಭದ್ರತೆಯಲ್ಲಿ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದು, ಕುಟುಂಬಸ್ಥರು ಹೊರತಾಗಿ ಯಾರಿಗೂ ಪ್ರವೇಶ ನೀಡುತ್ತಿಲ್ಲ. ಒಟ್ಟು ವಿಚಾರವನ್ನು ಅತ್ಯಂತ ಗೌಪ್ಯವಾಗಿರಿಸಲಾಗಿದೆ.
65 ವರ್ಷದ ದಾವೂದ್ ಇಬ್ರಾಹಿಂ ಕಳೆದ ಹಲವು ವರ್ಷಗಳಿಂದ ಕರಾಚಿಯ ನಿಗೂಢ ಸ್ಥಳದಲ್ಲಿ ವಾಸವಿದ್ದು, ಇದೀಗ ವಿಷಾಹಾರ ಸೇವನೆಗೆ ಒಳಗಾಗಿದ್ದಾನೆ ಎನ್ನುವ ವದಂತಿ ಹರಡಿದೆ. ಈ ಬಗ್ಗೆ ಪಾಕಿಸ್ತಾನದ ಸರಕಾರವಾಗಲೀ, ಸೇನೆಯಾಗಲೀ ಸುದ್ದಿ ಖಚಿತಪಡಿಸಿಲ್ಲ. ಇಂಡಿಯಾ ಟುಡೇ ಮಾಹಿತಿ ಪ್ರಕಾರ, ಎರಡು ದಿನಗಳ ಹಿಂದೆ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆಸ್ಪತ್ರೆಯ ಒಂದು ಮಹಡಿಯನ್ನು ಪೂರ್ತಿ ಕ್ಲೋಸ್ ಮಾಡಲಾಗಿದ್ದು, ಅದರಲ್ಲಿ ದಾವೂದ್ ಇದ್ದಾನೆಂದು ವರದಿ ಮಾಡಿದೆ. ಮುಂಬೈ ಪೊಲೀಸರು ದಾವೂದ್ ಕುರಿತ ಮಾಹಿತಿ ತಿಳಿಯಲು ಕುಟುಂಬಸ್ಥರನ್ನು ಸಂಪರ್ಕಿಸಿದ್ದಾರೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಸೇರಿದಂತೆ ಭಾರತದಲ್ಲಿ ಹಲವಾರು ರೀತಿಯ ವಿಧ್ವಂಸಕ ಕೃತ್ಯಗಳಲ್ಲಿ ದಾವೂದ್ ಕೈವಾಡ ಕಂಡುಬಂದಿತ್ತು. ಹೀಗಾಗಿ ದಾವೂದ್ ಇಬ್ರಾಹಿಂ ನನ್ನು ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಭಾರತದ ತನಿಖಾ ಏಜನ್ಸಿಗಳ ಕಣ್ಣು ತಪ್ಪಿಸಿ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದ ದಾವೂದ್ ಪತ್ತೆಗಾಗಿ ತನಿಖಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು.
ಇದೀಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿಷ ಪ್ರಾಶನಕ್ಕೀಡಾಗಿದ್ದಾನೆಂಬ ಅನುಮಾನ ವ್ಯಕ್ತವಾಗಿದೆ. ಇತ್ತೀಚೆಗೆ ಪಾಕಿಸ್ತಾನದಲ್ಲಿ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರರು ವಿಷ ಪ್ರಾಶನದಿಂದ ನಿಗೂಢ ಸಾವಿಗೀಡಾಗಿದ್ದರು. ಇದರ ಬೆನ್ನಲ್ಲೇ ದಾವೂದ್ ಗಂಭೀರಕ್ಕೆ ಒಳಗಾಗಿರುವುದು ವಿಷ ಪ್ರಾಶನದಿಂದಲೇ ಎನ್ನುವ ಶಂಕೆ ವ್ಯಕ್ತವಾಗಿದೆ. ಕಳೆದ ಹಲವು ವರ್ಷಗಳಲ್ಲಿ ದಾವೂದ್ ಅತಿಯಾದ ಮಧುಮೇಹ ಮತ್ತು ಗ್ಯಾಂಗ್ರೀನ್ ಕಾರಣದಿಂದಾಗಿ ಕಾಲನ್ನು ಕಳೆದುಕೊಂಡು ವಾಕಿಂಗ್ ಸ್ಟಿಕ್ ನಲ್ಲಿ ಆಚೀಚೆ ಹೋಗುತ್ತಿದ್ದ ಎನ್ನುವ ಮಾಹಿತಿಗಳಿದ್ದವು. ಎರಡು ವರ್ಷಗಳ ಹಿಂದೆ ಈ ಮಾಹಿತಿಯನ್ನು ದಾವೂದ್ ಬಂಟ ಛೋಟಾ ಶಕೀಲ್ ನಿರಾಕರಣೆ ಮಾಡಿದ್ದ.
Underworld don Dawood Ibrahim has reportedly been hospitalised in Pakistan's Karachi after being rumoured to be poisoned. According to reports, the mastermind of 1993 Mumbai blasts has been kept under tight security at the hospital.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm