ಬ್ರೇಕಿಂಗ್ ನ್ಯೂಸ್
18-12-23 10:50 pm HK News Desk ದೇಶ - ವಿದೇಶ
ನವದೆಹಲಿ, ಡಿ 18: ಭೂಗತ ಪಾತಕಿ ಹಾಗೂ 93ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂಗೆ ಅಪರಿಚಿತರು ವಿಷ ಉಣಿಸಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರಾಚಿಯ ಆಸ್ಪತ್ರೆಯಲ್ಲಿ ಭಾರೀ ಭದ್ರತೆಯಲ್ಲಿ ಅವನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ದಾವೂದ್ ಸತ್ತಿದ್ದಾನೆ ಎಂಬ ಪೋಸ್ಟ್ಗಳು ವೈರಲ್ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ದಾವೂದ್ ನ ಪ್ರಮುಖ ಅನುಯಾಯಿ ಛೋಟಾ ಶಕೀಲ್, ವದಂತಿಗಳೆಲ್ಲಾ ಸುಳ್ಳು, ದಾವೂದ್ ಇಬ್ರಾಹಿಂ ಆರೋಗ್ಯದಿಂದ ಇದ್ದಾರೆಂದು ತಿಳಿಸಿದ್ದಾನೆ.
ನಕಲಿ ಖಾತೆಯಿಂದ ಟ್ವೀಟ್ ;
ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರ ಹೆಸರಲ್ಲಿ ನಕಲಿ ಖಾತೆ ತೆರದು ದಾವೂದ್ ನಿಧನರಾಗಿದ್ದಾನೆ ಎಂಬ ಸ್ಕ್ರೀನ್ ಶಾಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಮಾನವೀಯತೆಗೆ ಹೆಸರಾಗಿರುವ, ಪ್ರತಿಯೊಬ್ಬ ಪಾಕಿಸ್ತಾನಿ ಹೃದಯದ ಆತ್ಮೀಯ ದಾವೂದ್ ಇಬ್ರಾಹಿಂ ಅಪರಿಚಿತರಿಂದ ವಿಷಪ್ರಾಶನಕ್ಕೊಳಗಾಗಿ ನಿಧನರಾಗಿದ್ದಾರೆ. ಅವರು ಕರಾಚಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅಲ್ಲಾ ಅವರಿಗೆ ಸ್ವರ್ಗದಲ್ಲಿ ಅತ್ಯುನ್ನತ ಸ್ಥಾನವನ್ನು ನೀಡಲಿ ಎಂದು ಬರೆದಿರುವ ಪೋಸ್ಟ್ ವೈರಲ್ ಆಗಿತ್ತು. ಆದರೆ ಇದು ಸುಳ್ಳು ಸುದ್ದಿ, ನಕಲಿ ಖಾತೆಯಿಂದ ಪೋಸ್ಟ್ ಆಗಿದೆ ಎಂದು ತಿಳಿದುಬಂದಿದೆ.
1986ರಲ್ಲಿ ದಾವೂದ್ ಪಲಾಯನ ;
ಇನ್ನೂ CBI ಪ್ರಕಾರ ದಾವೂದ್, ತನ್ನ ಗುರುತನ್ನು ಮರೆಮಾಡಲು 13 ಹೆಸರುಗಳನ್ನು ಬಳಸುತ್ತಾನೆ. 1980-90 ರ ದಶಕದ ಆರಂಭದಲ್ಲಿಆತ ವೇಶ್ಯಾವಾಟಿಕೆ, ಜೂಜು ಮತ್ತು ಮಾದಕವಸ್ತು ಸರಬರಾಜು ದಂದೆ ಮೂಲಕ ಮುಂಬೈ ಭೂಗತ ಲೋಕದ ಡಾನ್ ಆಗಿ ಮೆರೆದಾಡಿದ್ದ. ಈತನ ಮಾಫಿಯಾ 1980 ರ ದಶಕದಲ್ಲಿ ಮುಂಬೈನ ಆರ್ಥಿಕ ಕುಸಿತಕ್ಕೆ ಕಾರಣವಾಗಿತ್ತು. ತನ್ನ ಮೇಲಿನ ಕ್ರಿಮಿನಲ್ ಮೊಕದ್ದಮೆಯನ್ನು ತಪ್ಪಿಸಿಕೊಳ್ಳಲು ಆತ 1986 ರಲ್ಲಿ ದುಬೈಗೆ ಪಲಾಯನ ಮಾಡಿದ್ದ. ಹಲವು ವೇಷಗಳನ್ನು ಬದಲಿಸಿ ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಾನೆ
ದಾವೂದ್ ಗ್ಯಾಂಗ್ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಆತನ ಬಂಟ ಶಕೀಲ್ ತನ್ನ ಅನುಯಾಯಿಗಳ ಮೂಲಕ ಸುಲಿಗೆ ದಂಧೆ ನಡೆಸುತ್ತಾನೆ. ದಾವೂದ್ ಇಬ್ರಾಹಿಂ ಮತ್ತು ಆತನ ತಂಡದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಸಲೀಂ ಖುರೇಷಿ ಅಲಿಯಾಸ್ ಸಲೀಂ ಫ್ರೂಟ್ ಎಂಬಾತನನ್ನ ವಿಚಾರಣೆಗೆ ಒಳಪಡಿಸಿತ್ತು. ಆತ ಬಹಿರಂಗಪಡಿಸಿರುವ ವಿವರಗಳ ಪ್ರಕಾರ, 1995-96ರಲ್ಲಿ ಭಾರತ ತೊರೆದಿದ್ದ ದಾವೂದ್ ಅಂದಿನಿಂದ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದಾನೆ. 1993ರ ಮುಂಬೈ ಸ್ಫೋಟದ ಬಳಿಕ ದಾವೂದ್ ಇಬ್ರಾಹಿಂ ಪಾಕಿಸ್ತಾನಕ್ಕೆ ಪಲಾಯನ ಮಾಡಿದ್ದ. ಆದರೆ, ಪಾಕಿಸ್ತಾನ ಇದನ್ನು ಎಂದಿಗೂ ಒಪ್ಪಿಕೊಂಡಿಲ್ಲ.
Dawood Ibrahim's close aide Chhota Shakeel confirmed that the gangster is alive and healthy in an exclusive conversation with CNN-New18. “Dawood is alive and healthy. Even I was shocked to see this fake news. I met him multiple times yesterday," he said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm