ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.

ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm