ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.
ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm