ಬ್ರೇಕಿಂಗ್ ನ್ಯೂಸ್
19-12-23 01:13 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ.19: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಪಾಲಿನ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಸಾಧ್ಯತೆಗಳಿವೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.
"ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು.
ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭಗೊಂಡು 22ರ ವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆಸಲು ಮೂರು ಮಂದಿಯ ತಂಡವನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ದೇಶದ ವಿವಿಧೆಡೆಯಿಂದ ನಾಲ್ಕು ಸಾವಿರ ಸಾಧು ಸಂತರು, 2200 ಅತಿಥಿಗಳು ಆಗಮಿಸಲಿದ್ದಾರೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಜನವರಿ 24ರಿಂದ 48 ದಿವಸಗಳ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಜನವರಿ 23ರಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
BJP veterans LK Advani and Murli Manohar Joshi who were at the forefront of the agitation for the Ram temple in Ayodhya are unlikely to attend next month’s consecration ceremony due to their health and age, the temple trust said here on Monday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm