ಬ್ರೇಕಿಂಗ್ ನ್ಯೂಸ್
19-12-23 01:13 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ.19: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಪಾಲಿನ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಸಾಧ್ಯತೆಗಳಿವೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.
"ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು.
ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭಗೊಂಡು 22ರ ವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆಸಲು ಮೂರು ಮಂದಿಯ ತಂಡವನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ದೇಶದ ವಿವಿಧೆಡೆಯಿಂದ ನಾಲ್ಕು ಸಾವಿರ ಸಾಧು ಸಂತರು, 2200 ಅತಿಥಿಗಳು ಆಗಮಿಸಲಿದ್ದಾರೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಜನವರಿ 24ರಿಂದ 48 ದಿವಸಗಳ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಜನವರಿ 23ರಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
BJP veterans LK Advani and Murli Manohar Joshi who were at the forefront of the agitation for the Ram temple in Ayodhya are unlikely to attend next month’s consecration ceremony due to their health and age, the temple trust said here on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm