ಬ್ರೇಕಿಂಗ್ ನ್ಯೂಸ್
21-12-23 10:41 pm HK News Desk ದೇಶ - ವಿದೇಶ
ಲಕ್ನೋ, ಡಿ.21: ಸಹೋದರನಿಗೆ ಕಿಡ್ನಿ ದಾನ ಮಾಡಿದ್ದಕ್ಕೆ ಪ್ರತಿಯಾಗಿ ಹಣಕ್ಕಾಗಿ ಪೀಡಿಸಿದ್ದಲ್ಲದೆ, ಒಪ್ಪದ ಪತ್ನಿಗೆ ವಾಟ್ಸಪ್ ಮೂಲಕ ಪತಿ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿರುವ ಘಟನೆ ಉತ್ತರಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಈ ಬಗ್ಗೆ ಧನೇಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೈತಾಪುರ ನಿವಾಸಿ ತರುನ್ನುಮ್ ಎಂಬಾಕೆ ರಶೀದ್ ಎಂಬಾತನನ್ನು 20 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ರಶೀದ್ ಮತ್ತೊಂದು ಮದುವೆಯಾಗಿದ್ದ. ರಶೀದ್ ಸೌದಿಯಲ್ಲಿ ಉದ್ಯೋಗದಲ್ಲಿದ್ದು ಈ ನಡುವೆ ತರುನ್ನುಮ್ ಸಹೋದರ ಶಾಕೀರ್ ಕಿಡ್ನಿ ವೈಫಲ್ಯಕ್ಕೀಡಾಗಿದ್ದ. ಕಿಡ್ನಿ ಸಿಗದೇ ಇದ್ದರೆ ಪ್ರಾಣಕ್ಕೆ ಅಪಾಯ ಇದೆಯೆಂದು ವೈದ್ಯರ ಹೇಳಿಕೆಯಂತೆ ಸೋದರನ ಪ್ರಾಣ ಉಳಿಸಲು ತರುನ್ನುಮ್ ಮುಂದಾಗಿದ್ದಳು. ಬಳಿಕ ಶಾಕೀರ್ಗೆ ಮುಂಬೈನ ಆಸ್ಪತ್ರೆಯಲ್ಲಿ ಕಿಡ್ನಿ ಜೋಡಣೆ ಮಾಡಲಾಗಿತ್ತು.
ಕಿಡ್ನಿ ಜೋಡಣೆ ಯಶಸ್ವಿಯಾದ ಬಳಿಕ ಪತಿಯ ಮನೆಗೆ ತೆರಳಿದಾಗ, ಪತಿ ಉಲ್ಟಾ ಹೊಡೆದಿದ್ದ. ಕಿಡ್ನಿ ಕೊಟ್ಟಿದ್ದಕ್ಕೆ ಪ್ರತಿಯಾಗಿ 40 ಲಕ್ಷ ರೂ. ಕೇಳಿ ಪಡೆಯುವಂತೆ ಬೇಡಿಕೆ ಇಟ್ಟಿದ್ದ. ಇದಕ್ಕೊಪ್ಪದ ಪತ್ನಿ ತರುನ್ನುಮ್ಗೆ ರಶೀದ್, ವಾಟ್ಸ್ಆ್ಯಪ್ ನಲ್ಲಿಯೇ ತ್ರಿವಳಿ ತಲಾಖ್ ನೀಡಿದ್ದಾನೆ. ವಿಚ್ಚೇದನ ಬಳಿಕವೂ ಪತಿಯ ಮನೆಯಲ್ಲೇ ತರುನ್ನುಮ್ ವಾಸವಿದ್ದಳು. ಆದರೆ ಈಗ ಕಿರುಕುಳ ಆರಂಭಿಸಿದ್ದರಿಂದ ಪತಿಯ ಮನೆ ಬಿಟ್ಟು ತಾಯಿ ಮನೆಗೆ ಬಂದು ಪೊಲೀಸ್ ದೂರು ನೀಡಿದ್ದಾಳೆ.
A man gave triple talaq to his wife over WhatsApp after she donated a kidney to her ailing brother. The man works in Saudi Arabia, while the wife stays in Bairiyahi village in Uttar Pradesh’s Gonda district. The incident unfolded after the wife took a decision to save her brother by donating one of her kidneys. Little did she anticipate that the noble act would become the catalyst for the dissolution of her marriage.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm