ಬ್ರೇಕಿಂಗ್ ನ್ಯೂಸ್
21-12-23 10:46 pm HK News Desk ದೇಶ - ವಿದೇಶ
ನವದೆಹಲಿ, ಡಿ.21: ಬಿಜೆಪಿ ಸಂಸದ, ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಭಾರತ ಕುಸ್ತಿ ಫೆಡರೇಷನ್ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ವಿರೋಧ ಕೇಳಿಬಂದಿದೆ. ಇದರ ಬೆನ್ನಲ್ಲೇ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಘೋಷಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿದ ಸಾಕ್ಷಿ ಮಲಿಕ್, ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬ್ಯುಸಿನೆಸ್ ಪಾರ್ಟನರ್ ಆಗಿರುವ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಮಾನಸಿಕ ನೋವು ತಂದಿದೆ. ಇದಕ್ಕಾಗಿ ನಾನು ಕುಸ್ತಿ ಪಂದ್ಯಗಳಿಂದಲೇ ದೂರವಾಗುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಹೇಳಿದ್ದಾರೆ. ಅಲ್ಲದೆ, ತಮ್ಮ ಶೂ ಕಳಚಿ ಸುದ್ದಿಗೋಷ್ಠಿ ನಡೆಯುತ್ತಿದ್ದ ಟೇಬಲ್ ಮೇಲೆ ಇರಿಸಿ, ಕಣ್ಣೀರು ಸುರಿಸಿದರು. 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ನಲ್ಲಿ ಸಾಕ್ಷಿ ಮಲಿಕ್ ಕಂಚಿನ ಪದಕ ಗೆದ್ದು ಜಗತ್ತಿನ ಗಮನ ಸೆಳೆದಿದ್ದರು.
ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಪದಕ ವಿಜೇತ ಮತ್ತೊಬ್ಬ ಕುಸ್ತಿ ಪಟು ವಿನೇಷ್ ಫೋಗಟ್ ಕೂಡಾ ಸುದ್ದಿಗೋಷ್ಠಿಯಲ್ಲಿ ಜೊತೆಗಿದ್ದು ಕಣ್ಣೀರಿಟ್ಟರು. ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿ ಪಟುಗಳ ಮೇಲೆ ದೌರ್ಜನ್ಯ ಮುಂದುವರಿಯಲಿದೆ. ನಮಗೆ ನ್ಯಾಯ ಸಿಗುವುದು ಹೇಗೆ ಎಂದು ನಮಗೆ ಗೊತ್ತಾಗುತ್ತಿಲ್ಲ. ನಮ್ಮ ಕುಸ್ತಿ ಭವಿಷ್ಯ ಹೇಗೆ ಎಂಬ ಚಿಂತೆ ಶುರುವಾಗಿದೆ. ಎಲ್ಲಿಗೆ ಹೋಗಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಫೋಗಟ್ ಹೇಳಿದರು.
ಕೇಂದ್ರ ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದು ದೌರ್ಭಾಗ್ಯ ಎಂದು ಮತ್ತೊಬ್ಬ ಕುಸ್ತಿ ಪಟು ಬಜರಂಗ್ ಪುನಿಯಾ ಬೇಸರ ಹೇಳಿಕೊಂಡರು. ನಮಗೆ ಯಾವುದೇ ಪಕ್ಷದ ಜೊತೆ ಸಂಬಂಧವಿಲ್ಲ. ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತನೇ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾರೆ. ಇವರಿಂದ ನಮಗೆ ನ್ಯಾಯ ಸಿಗಬಹುದೇ ಎಂದು ಪುನಿಯಾ ಪ್ರಶ್ನಿಸಿದರು.
Former WFI chief Brij Bhushan Sharan Singh's aid Sanjay Singh has been elected the new president of the Wrestling Federation of India. After numerous postponements earlier in the year, the Wrestling Federation of India elections were held on Thursday, December 21. The voting was held earlier in the day in New Delhi and the counting began soon after the voting process ended.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm