ಬ್ರೇಕಿಂಗ್ ನ್ಯೂಸ್
21-12-23 10:55 pm HK News Desk ದೇಶ - ವಿದೇಶ
ಶ್ರೀನಗರ, ಡಿ.21: ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್ ನಲ್ಲಿ ಎರಡು ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ನಾಲ್ಕು ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ತೀವ್ರ ಗಾಯಗೊಂಡಿದ್ದಾರೆ.
ತಾನಾಮಂಡಿ ರಜೌರಿ ಏರಿಯಾದಲ್ಲಿ ಮಧ್ಯಾಹ್ನ 3.45ಕ್ಕೆ ಸೇನಾ ಯೋಧರನ್ನು ಒಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಪ್ರತಿ ದಾಳಿ ನಡೆಸಲಾಗಿದ್ದು, ಅಷ್ಟರಲ್ಲಿ ನಾಲ್ಕು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸಲಾಗುತ್ತಿದೆ.
ಇತ್ತೀಚೆಗೆ ರಜೌರಿ ಪ್ರದೇಶದ ಧರ್ಮಶಾಲಾ ಬಳಿ ಸೇನಾ ಯೋಧರ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಕ್ಯಾಪ್ಟನ್ ಸೇರಿ ಐವರು ಯೋಧರು ಸಾವನ್ನಪ್ಪಿದ್ದರು. ಲಷ್ಕರ್ ತೈಬಾ ಸಂಘಟನೆಯ ಕಮಾಂಡರ್ ಆಗಿರುವ ಕ್ವಾರಿ ಎಂಬಾತನ ಸೂತ್ರದಡಿ ನವೆಂಬರ್ ತಿಂಗಳಲ್ಲಿ ಹಲವಾರು ಉಗ್ರ ದಾಳಿ ನಡೆದಿದ್ದವು. ಅದರಲ್ಲಿ ಐವರು ಯೋಧರು ಮತ್ತು ಹತ್ತು ಮಂದಿ ನಾಗರಿಕರು ಮಡಿದಿದ್ದರು. ಇದೀಗ ಡಿಸೆಂಬರ್ ತಿಂಗಳಲ್ಲಿಯೂ ಉಗ್ರರ ದಾಳಿ ಮುಂದುವರಿದಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಯತ್ನ ನಡೆಯುತ್ತಿರುವಂತೆಯೇ ಉಗ್ರರು ಚಿಗಿತುಕೊಂಡು ದಾಳಿ ಮುಂದುವರಿಸಿದ್ದಾರೆ.
The vehicles, carrying personnel to the site of an overnight cordon-and-search operation, came under attack at Dhatyar Morh at about 3.45pm on Thursday.A defence spokesperson said a search operation was launched in the general area of Dhera Ki Gali (DKG) in Poonch district on Wednesday night based on “hard intelligence” about the presence of terrorists and an encounter ensued there.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm