ಬ್ರೇಕಿಂಗ್ ನ್ಯೂಸ್
23-12-23 07:15 pm HK News Desk ದೇಶ - ವಿದೇಶ
ನವದೆಹಲಿ, ಡಿ.23: ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ ಸಿಂಗ್ ಆಪ್ತ ಆಯ್ಕೆಯಾಗಿರುವುದನ್ನು ವಿರೋಧಿಸಿ ಮತ್ತೊಬ್ಬ ಕುಸ್ತಿ ಪಟು ವೀರೇಂದ್ರ ಸಿಂಗ್ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿಕೆ ನೀಡಿದ್ದಾರೆ. ತಾನು ಕ್ರೀಡೆಯನ್ನೇ ತ್ಯಜಿಸುತ್ತೇನೆ ಎಂದು ಹೇಳಿದ್ದ ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ತಾನು ಪದ್ಮಶ್ರೀ ಹಿಂತಿರುಗಿಸುತ್ತೇನೆ ಎಂದಿದ್ದಾರೆ.
ನಿನ್ನೆ ಸಾಕ್ಷಿ ಮಲಿಕ್ ಹೇಳಿಕೆಯ ಬೆನ್ನಲ್ಲೇ ಕುಸ್ತಿ ಪಟು ಬಜರಂಗ್ ಪುನಿಯಾ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದರು. ಇದೀಗ ಸಾಕ್ಷಿ ಮಲಿಕ್ ಬೆಂಬಲಿಸಿ ತನ್ನನ್ನು ಗೂಂಗಾ ಪೈಲ್ವಾನ್ ಎಂದೇ ಗುರುತಿಸಿಕೊಳ್ಳುವ ವೀರೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ತನ್ನ ಪೋಸ್ಟ್ ಅನ್ನು ಸಚಿನ್ ತೆಂಡುಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಟ್ಯಾಗ್ ಮಾಡಿದ್ದಾರೆ. ತನ್ನ ಪೋಸ್ಟ್ ಅನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ ಬರೆದಿದ್ದಾರೆ.
ಹೊಸತಾಗಿ ಕುಸ್ತಿ ಫೆಡರೇಶನ್ ಅಧ್ಯಕ್ಷನಾಗಿರುವ ಸಂಜಯ್ ಸಿಂಗ್ ಈ ಹಿಂದೆ ಬ್ರಿಜ್ ಭೂಷಣ ಸಿಂಗ್ ಅವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ತೀವ್ರ ವಿರೋಧ ಕೇಳಿಬಂದ ಬಳಿಕ ಕುಸ್ತಿ ಒಕ್ಕೂಟದ ಅಧ್ಯಕ್ಷ ಹುದ್ದೆಯಿಂದ ಹಿಂದೆ ಸರಿದಿದ್ದ ಬ್ರಿಜ್ ಭೂಷಣ್ ಸಿಂಗ್ ಇದೀಗ ತನ್ನ ಸಹಾಯಕನನ್ನೇ ಆ ಹುದ್ದೆಗೇರಿಸಿದ್ದಾರೆ. ಆದರೆ ಕುಸ್ತಿ ಪಟುಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಬ್ರಿಜ್ ಭೂಷಣ್ ಸಿಂಗ್ ಉತ್ತರ ಪ್ರದೇಶದಿಂದ ಆರು ಬಾರಿ ಸಂಸದರಾಗಿದ್ದಾರೆ.
A day after Bajrang Punia returned his Padma Shri Award to Prime Minister Narendra Modi, 2005 Summer Deaflympics gold medal winner Virender Singh Yadav announced he will do the same as a protest after Brij Bhushan Singh’s close aide Sanjay Singh was elected as the President of Wrestling Federation of India (WFI).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm