ಬ್ರೇಕಿಂಗ್ ನ್ಯೂಸ್
23-12-23 07:15 pm HK News Desk ದೇಶ - ವಿದೇಶ
ನವದೆಹಲಿ, ಡಿ.23: ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ ಸಿಂಗ್ ಆಪ್ತ ಆಯ್ಕೆಯಾಗಿರುವುದನ್ನು ವಿರೋಧಿಸಿ ಮತ್ತೊಬ್ಬ ಕುಸ್ತಿ ಪಟು ವೀರೇಂದ್ರ ಸಿಂಗ್ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿಕೆ ನೀಡಿದ್ದಾರೆ. ತಾನು ಕ್ರೀಡೆಯನ್ನೇ ತ್ಯಜಿಸುತ್ತೇನೆ ಎಂದು ಹೇಳಿದ್ದ ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ತಾನು ಪದ್ಮಶ್ರೀ ಹಿಂತಿರುಗಿಸುತ್ತೇನೆ ಎಂದಿದ್ದಾರೆ.
ನಿನ್ನೆ ಸಾಕ್ಷಿ ಮಲಿಕ್ ಹೇಳಿಕೆಯ ಬೆನ್ನಲ್ಲೇ ಕುಸ್ತಿ ಪಟು ಬಜರಂಗ್ ಪುನಿಯಾ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದರು. ಇದೀಗ ಸಾಕ್ಷಿ ಮಲಿಕ್ ಬೆಂಬಲಿಸಿ ತನ್ನನ್ನು ಗೂಂಗಾ ಪೈಲ್ವಾನ್ ಎಂದೇ ಗುರುತಿಸಿಕೊಳ್ಳುವ ವೀರೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ತನ್ನ ಪೋಸ್ಟ್ ಅನ್ನು ಸಚಿನ್ ತೆಂಡುಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಟ್ಯಾಗ್ ಮಾಡಿದ್ದಾರೆ. ತನ್ನ ಪೋಸ್ಟ್ ಅನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ ಬರೆದಿದ್ದಾರೆ.
ಹೊಸತಾಗಿ ಕುಸ್ತಿ ಫೆಡರೇಶನ್ ಅಧ್ಯಕ್ಷನಾಗಿರುವ ಸಂಜಯ್ ಸಿಂಗ್ ಈ ಹಿಂದೆ ಬ್ರಿಜ್ ಭೂಷಣ ಸಿಂಗ್ ಅವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ತೀವ್ರ ವಿರೋಧ ಕೇಳಿಬಂದ ಬಳಿಕ ಕುಸ್ತಿ ಒಕ್ಕೂಟದ ಅಧ್ಯಕ್ಷ ಹುದ್ದೆಯಿಂದ ಹಿಂದೆ ಸರಿದಿದ್ದ ಬ್ರಿಜ್ ಭೂಷಣ್ ಸಿಂಗ್ ಇದೀಗ ತನ್ನ ಸಹಾಯಕನನ್ನೇ ಆ ಹುದ್ದೆಗೇರಿಸಿದ್ದಾರೆ. ಆದರೆ ಕುಸ್ತಿ ಪಟುಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಬ್ರಿಜ್ ಭೂಷಣ್ ಸಿಂಗ್ ಉತ್ತರ ಪ್ರದೇಶದಿಂದ ಆರು ಬಾರಿ ಸಂಸದರಾಗಿದ್ದಾರೆ.
A day after Bajrang Punia returned his Padma Shri Award to Prime Minister Narendra Modi, 2005 Summer Deaflympics gold medal winner Virender Singh Yadav announced he will do the same as a protest after Brij Bhushan Singh’s close aide Sanjay Singh was elected as the President of Wrestling Federation of India (WFI).
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm