ಬ್ರೇಕಿಂಗ್ ನ್ಯೂಸ್
24-12-23 09:07 pm HK News Desk ದೇಶ - ವಿದೇಶ
ನವದೆಹಲಿ, ಡಿ.24: ಮಹತ್ವದ ಬೆಳವಣಿಗೆಯಲ್ಲಿ ಮೊನ್ನೆಯಷ್ಟೇ ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ ಸಮಿತಿಯನ್ನು ಕೇಂದ್ರ ಸರ್ಕಾರದ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿ ಆದೇಶ ಮಾಡಿದೆ.
ಕುಸ್ತಿ ಫೆಡರೇಶನ್ ಹೊಸತಾಗಿದ್ದರೂ ಹಳೆಯ ಅಧ್ಯಕ್ಷರದ್ದೇ ಹಿಡಿತದಲ್ಲಿದೆ, ಕುಸ್ತಿ ಪಂದ್ಯಾಟ ನಡೆಸುವ ವಿಚಾರದಲ್ಲಿ ಒಕ್ಕೂಟದ ನಿಯಮವನ್ನು ಉಲ್ಲಂಘಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಅದನ್ನು ಹಿಂದಿನ ಅಧ್ಯಕ್ಷರ ಊರಲ್ಲೇ ತರಾತುರಿಯಲ್ಲಿ ಆಯೋಜಿಸಿರುವುದು ಆಕ್ಷೇಪಾರ್ಹ ಎಂದು ಕ್ರೀಡಾ ಸಚಿವಾಲಯ ನೂತನ ಸಮಿತಿಯನ್ನೇ ಅಮಾನತುಗೊಳಿಸಿದ್ದಾಗಿ ಹೇಳಿಕೊಂಡಿದೆ. ಆದರೆ ಕುಸ್ತಿ ಒಕ್ಕೂಟಕ್ಕೆ ಹೊಸತಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಜಯ್ ಸಿಂಗ್ ಬಗ್ಗೆ ಭಾರೀ ಟೀಕೆ ಎದುರಾಗಿತ್ತು. ಕುಸ್ತಿ ಪಟು ಸಾಕ್ಷಿ ಮಲಿಕ್ ಕ್ರೀಡೆಯನ್ನೇ ತೊರೆಯುವ ಮಾತನ್ನಾಡಿದ್ದರೆ, ಬಜರಂಗ್ ಪುನಿಯಾ, ವೀರೇಂದ್ರ ಸಿಂಗ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚತ್ತುಕೊಂಡ ಕೇಂದ್ರ ಸರ್ಕಾರ, ಆರೋಪ ಹೊತ್ತ ಬ್ರಿಜ್ ಭೂಷಣ್ ಸಿಂಗ್ ಆಪ್ತರಿದ್ದ ಕುಸ್ತಿ ಒಕ್ಕೂಟದ ಸಮಿತಿಯನ್ನೇ ಅಮಾನತು ಗೊಳಿಸಿದೆ.
ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಸಿಂಗ್ ಆಯ್ಕೆಯಾದ ಬೆನ್ನಲ್ಲೇ 15 ಮತ್ತು 20 ವರ್ಷದ ಒಳಗಿನ ರಾಷ್ಟ್ರೀಯ ಕುಸ್ತಿ ಪಂದ್ಯಾಟವನ್ನು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯ ಕುಸ್ತಿ ಪಟುಗಳಿಗೆ ಸೂಚನೆ ನೀಡದೆ ಮತ್ತು ಒಕ್ಕೂಟದ ಸಂವಿಧಾನದ ನಿಬಂಧನೆಗಳನ್ನು ಅನುಸರಿಸದೆ ಈ ಘೋಷಣೆಯನ್ನು ಮಾಡಲಾಗಿದೆ ಎಂದು ಸಚಿವಾಲಯ ಹೇಳಿಕೊಂಡಿದೆ. ಗೊಂಡಾ ಜಿಲ್ಲೆ ಹಿಂದಿನ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು ಇದಕ್ಕಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.
The Sports Ministry suspended the Wrestling Federation of India (WFI) on Sunday until further notice following an abrupt announcement of the national championships by the newly-elected body.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm