ಬ್ರೇಕಿಂಗ್ ನ್ಯೂಸ್
24-12-23 09:07 pm HK News Desk ದೇಶ - ವಿದೇಶ
ನವದೆಹಲಿ, ಡಿ.24: ಮಹತ್ವದ ಬೆಳವಣಿಗೆಯಲ್ಲಿ ಮೊನ್ನೆಯಷ್ಟೇ ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ ಸಮಿತಿಯನ್ನು ಕೇಂದ್ರ ಸರ್ಕಾರದ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿ ಆದೇಶ ಮಾಡಿದೆ.
ಕುಸ್ತಿ ಫೆಡರೇಶನ್ ಹೊಸತಾಗಿದ್ದರೂ ಹಳೆಯ ಅಧ್ಯಕ್ಷರದ್ದೇ ಹಿಡಿತದಲ್ಲಿದೆ, ಕುಸ್ತಿ ಪಂದ್ಯಾಟ ನಡೆಸುವ ವಿಚಾರದಲ್ಲಿ ಒಕ್ಕೂಟದ ನಿಯಮವನ್ನು ಉಲ್ಲಂಘಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಅದನ್ನು ಹಿಂದಿನ ಅಧ್ಯಕ್ಷರ ಊರಲ್ಲೇ ತರಾತುರಿಯಲ್ಲಿ ಆಯೋಜಿಸಿರುವುದು ಆಕ್ಷೇಪಾರ್ಹ ಎಂದು ಕ್ರೀಡಾ ಸಚಿವಾಲಯ ನೂತನ ಸಮಿತಿಯನ್ನೇ ಅಮಾನತುಗೊಳಿಸಿದ್ದಾಗಿ ಹೇಳಿಕೊಂಡಿದೆ. ಆದರೆ ಕುಸ್ತಿ ಒಕ್ಕೂಟಕ್ಕೆ ಹೊಸತಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಜಯ್ ಸಿಂಗ್ ಬಗ್ಗೆ ಭಾರೀ ಟೀಕೆ ಎದುರಾಗಿತ್ತು. ಕುಸ್ತಿ ಪಟು ಸಾಕ್ಷಿ ಮಲಿಕ್ ಕ್ರೀಡೆಯನ್ನೇ ತೊರೆಯುವ ಮಾತನ್ನಾಡಿದ್ದರೆ, ಬಜರಂಗ್ ಪುನಿಯಾ, ವೀರೇಂದ್ರ ಸಿಂಗ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚತ್ತುಕೊಂಡ ಕೇಂದ್ರ ಸರ್ಕಾರ, ಆರೋಪ ಹೊತ್ತ ಬ್ರಿಜ್ ಭೂಷಣ್ ಸಿಂಗ್ ಆಪ್ತರಿದ್ದ ಕುಸ್ತಿ ಒಕ್ಕೂಟದ ಸಮಿತಿಯನ್ನೇ ಅಮಾನತು ಗೊಳಿಸಿದೆ.
ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಸಿಂಗ್ ಆಯ್ಕೆಯಾದ ಬೆನ್ನಲ್ಲೇ 15 ಮತ್ತು 20 ವರ್ಷದ ಒಳಗಿನ ರಾಷ್ಟ್ರೀಯ ಕುಸ್ತಿ ಪಂದ್ಯಾಟವನ್ನು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯ ಕುಸ್ತಿ ಪಟುಗಳಿಗೆ ಸೂಚನೆ ನೀಡದೆ ಮತ್ತು ಒಕ್ಕೂಟದ ಸಂವಿಧಾನದ ನಿಬಂಧನೆಗಳನ್ನು ಅನುಸರಿಸದೆ ಈ ಘೋಷಣೆಯನ್ನು ಮಾಡಲಾಗಿದೆ ಎಂದು ಸಚಿವಾಲಯ ಹೇಳಿಕೊಂಡಿದೆ. ಗೊಂಡಾ ಜಿಲ್ಲೆ ಹಿಂದಿನ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು ಇದಕ್ಕಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.
The Sports Ministry suspended the Wrestling Federation of India (WFI) on Sunday until further notice following an abrupt announcement of the national championships by the newly-elected body.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm