ಬ್ರೇಕಿಂಗ್ ನ್ಯೂಸ್
24-12-23 09:07 pm HK News Desk ದೇಶ - ವಿದೇಶ
ನವದೆಹಲಿ, ಡಿ.24: ಮಹತ್ವದ ಬೆಳವಣಿಗೆಯಲ್ಲಿ ಮೊನ್ನೆಯಷ್ಟೇ ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ ಸಮಿತಿಯನ್ನು ಕೇಂದ್ರ ಸರ್ಕಾರದ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿ ಆದೇಶ ಮಾಡಿದೆ.
ಕುಸ್ತಿ ಫೆಡರೇಶನ್ ಹೊಸತಾಗಿದ್ದರೂ ಹಳೆಯ ಅಧ್ಯಕ್ಷರದ್ದೇ ಹಿಡಿತದಲ್ಲಿದೆ, ಕುಸ್ತಿ ಪಂದ್ಯಾಟ ನಡೆಸುವ ವಿಚಾರದಲ್ಲಿ ಒಕ್ಕೂಟದ ನಿಯಮವನ್ನು ಉಲ್ಲಂಘಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಅದನ್ನು ಹಿಂದಿನ ಅಧ್ಯಕ್ಷರ ಊರಲ್ಲೇ ತರಾತುರಿಯಲ್ಲಿ ಆಯೋಜಿಸಿರುವುದು ಆಕ್ಷೇಪಾರ್ಹ ಎಂದು ಕ್ರೀಡಾ ಸಚಿವಾಲಯ ನೂತನ ಸಮಿತಿಯನ್ನೇ ಅಮಾನತುಗೊಳಿಸಿದ್ದಾಗಿ ಹೇಳಿಕೊಂಡಿದೆ. ಆದರೆ ಕುಸ್ತಿ ಒಕ್ಕೂಟಕ್ಕೆ ಹೊಸತಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಜಯ್ ಸಿಂಗ್ ಬಗ್ಗೆ ಭಾರೀ ಟೀಕೆ ಎದುರಾಗಿತ್ತು. ಕುಸ್ತಿ ಪಟು ಸಾಕ್ಷಿ ಮಲಿಕ್ ಕ್ರೀಡೆಯನ್ನೇ ತೊರೆಯುವ ಮಾತನ್ನಾಡಿದ್ದರೆ, ಬಜರಂಗ್ ಪುನಿಯಾ, ವೀರೇಂದ್ರ ಸಿಂಗ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚತ್ತುಕೊಂಡ ಕೇಂದ್ರ ಸರ್ಕಾರ, ಆರೋಪ ಹೊತ್ತ ಬ್ರಿಜ್ ಭೂಷಣ್ ಸಿಂಗ್ ಆಪ್ತರಿದ್ದ ಕುಸ್ತಿ ಒಕ್ಕೂಟದ ಸಮಿತಿಯನ್ನೇ ಅಮಾನತು ಗೊಳಿಸಿದೆ.
ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಸಿಂಗ್ ಆಯ್ಕೆಯಾದ ಬೆನ್ನಲ್ಲೇ 15 ಮತ್ತು 20 ವರ್ಷದ ಒಳಗಿನ ರಾಷ್ಟ್ರೀಯ ಕುಸ್ತಿ ಪಂದ್ಯಾಟವನ್ನು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯ ಕುಸ್ತಿ ಪಟುಗಳಿಗೆ ಸೂಚನೆ ನೀಡದೆ ಮತ್ತು ಒಕ್ಕೂಟದ ಸಂವಿಧಾನದ ನಿಬಂಧನೆಗಳನ್ನು ಅನುಸರಿಸದೆ ಈ ಘೋಷಣೆಯನ್ನು ಮಾಡಲಾಗಿದೆ ಎಂದು ಸಚಿವಾಲಯ ಹೇಳಿಕೊಂಡಿದೆ. ಗೊಂಡಾ ಜಿಲ್ಲೆ ಹಿಂದಿನ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು ಇದಕ್ಕಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.
The Sports Ministry suspended the Wrestling Federation of India (WFI) on Sunday until further notice following an abrupt announcement of the national championships by the newly-elected body.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm