ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.
ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.
ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm