ಬ್ರೇಕಿಂಗ್ ನ್ಯೂಸ್
26-12-23 02:10 pm HK News Desk ದೇಶ - ವಿದೇಶ
ಮುಂಬೈ, ಡಿ.26: ಅರಬ್ಬೀ ಸಮುದ್ರದಲ್ಲಿ ಡ್ರೋಣ್ ದಾಳಿಗೆ ಒಳಗಾಗಿದ್ದ ಇಸ್ರೇಲ್ ಮೂಲದ ವಾಣಿಜ್ಯ ಹಡಗು ಎಂವಿ ಕೆಮ್ ಫ್ಲೂಟೊ ಸದ್ಯ ಮುಂಬೈ ಬಂದರನ್ನು ತಲುಪಿದೆ. ಡ್ರೋನ್ ದಾಳಿಯಿಂದ ಹಡಗಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದ್ದು ನೌಕಾಸೇನೆ ವಿವಿಧ ಏಜನ್ಸಿಗಳ ಜೊತೆಗೆ ಹೆಚ್ಚಿನ ತನಿಖೆ ಆರಂಭಿಸಿದೆ.
ಸೌದಿ ಅರೇಬಿಯಾದಿಂದ ಮಂಗಳೂರಿನ ಬಂದರಿಗೆ ಕಚ್ಚಾ ತೈಲ ಹೊತ್ತುಕೊಂಡು ಹೊರಟಿದ್ದ ಹಡಗಿನ ಮೇಲೆ ಗುಜರಾತ್ ಬಳಿ ಸಮುದ್ರ ಮಧ್ಯೆ ಡ್ರೋಣ್ ದಾಳಿ ನಡೆಸಲಾಗಿತ್ತು. ಈ ದಾಳಿಯನ್ನು ಇರಾನ್ ನಡೆಸಿದೆ ಎಂದು ಅಮೆರಿಕದ ಭದ್ರತಾ ಸಂಸ್ಥೆ ಹೇಳಿತ್ತು. ಸರಕು ಹಡಗು ಡಿಸೆಂಬರ್ 19 ರಂದು ಪ್ರಯಾಣ ಆರಂಭಿಸಿತ್ತು. ಡಿಸೆಂಬರ್ 25 ರಂದು ನವ ಮಂಗಳೂರು ಬಂದರಿಗೆ ತಲುಪಬೇಕಿತ್ತು. ಡಿಸೆಂಬರ್ 23 ರಂದು ಗುಜರಾತ್ನ ವೆರಾವಲ್ ಕರಾವಳಿಯಿಂದ ಸುಮಾರು 200 ನಾಟಿಕಲ್ ಮೈಲುಗಳಷ್ಟು ದೂರದ ಸಮುದ್ರದಲ್ಲಿ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿತ್ತು. ಜಪಾನ್ ಒಡೆತನದ ಹಡಗು ಇದಾಗಿದ್ದು, ಇಸ್ರೇಲ್ ಸಹಭಾಗಿತ್ವ ಹೊಂದಿದೆ.



ದಾಳಿಯ ಮಾಹಿತಿ ತಿಳಿದ ತಕ್ಷಣ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್ಗೆ ಸಂಕಷ್ಟದಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ಹೋಗುವಂತೆ ಸೂಚಿಸಲಾಗಿತ್ತು. ಅದರಂತೆ ದಾಳಿಗೀಡಾದ ಎಂವಿ ಕೆಮ್ ಫ್ಲೂಟೋ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ಮುಂಬೈ ಬಂದರಿಗೆ ತಲುಪುವಂತೆ ಮಾಡಿದೆ.
ಪರಿಶೀಲನೆ ಬಳಿಕ ಇದು ಡ್ರೋನ್ ದಾಳಿ ಎಂದು ಭಾರತೀಯ ನೌಕಾಪಡೆ ಖಚಿತಪಡಿಸಿದೆ. ಹೆಚ್ಚಿನ ವಿವರಗಳಿಗಾಗಿ ಫೋರೆನ್ಸಿಕ್ ತನಿಖೆಯ ನಂತರ ದುರಸ್ತಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಭಾರತೀಯ ನೌಕಾಪಡೆಯು ಅರಬ್ಬೀ ಸಮುದ್ರದಲ್ಲಿ ಹಡಗುಗಳ ಮೇಲಿನ ದಾಳಿಯ ದೃಷ್ಟಿಯಿಂದ ಕಣ್ಗಾವಲುಗಾಗಿ P-8I ಗಸ್ತು ವಿಮಾನಗಳನ್ನು ನಿಯೋಜಿಸಿದೆ.
Chemical tanker MV Chem Pluto was struck by a drone off India's west coast on Saturday. The attack came amid increasing concerns over various commercial vessels being targeted reportedly by Iran-backed Houthi militants in the Red Sea and Gulf of Aden amid the Israel-Hamas conflict. The vessel with 21 Indian and one Vietnamese crew, anchored at outer anchorage off Mumbai at 3.30 pm.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm