ಬ್ರೇಕಿಂಗ್ ನ್ಯೂಸ್
26-12-23 02:10 pm HK News Desk ದೇಶ - ವಿದೇಶ
ಮುಂಬೈ, ಡಿ.26: ಅರಬ್ಬೀ ಸಮುದ್ರದಲ್ಲಿ ಡ್ರೋಣ್ ದಾಳಿಗೆ ಒಳಗಾಗಿದ್ದ ಇಸ್ರೇಲ್ ಮೂಲದ ವಾಣಿಜ್ಯ ಹಡಗು ಎಂವಿ ಕೆಮ್ ಫ್ಲೂಟೊ ಸದ್ಯ ಮುಂಬೈ ಬಂದರನ್ನು ತಲುಪಿದೆ. ಡ್ರೋನ್ ದಾಳಿಯಿಂದ ಹಡಗಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದ್ದು ನೌಕಾಸೇನೆ ವಿವಿಧ ಏಜನ್ಸಿಗಳ ಜೊತೆಗೆ ಹೆಚ್ಚಿನ ತನಿಖೆ ಆರಂಭಿಸಿದೆ.
ಸೌದಿ ಅರೇಬಿಯಾದಿಂದ ಮಂಗಳೂರಿನ ಬಂದರಿಗೆ ಕಚ್ಚಾ ತೈಲ ಹೊತ್ತುಕೊಂಡು ಹೊರಟಿದ್ದ ಹಡಗಿನ ಮೇಲೆ ಗುಜರಾತ್ ಬಳಿ ಸಮುದ್ರ ಮಧ್ಯೆ ಡ್ರೋಣ್ ದಾಳಿ ನಡೆಸಲಾಗಿತ್ತು. ಈ ದಾಳಿಯನ್ನು ಇರಾನ್ ನಡೆಸಿದೆ ಎಂದು ಅಮೆರಿಕದ ಭದ್ರತಾ ಸಂಸ್ಥೆ ಹೇಳಿತ್ತು. ಸರಕು ಹಡಗು ಡಿಸೆಂಬರ್ 19 ರಂದು ಪ್ರಯಾಣ ಆರಂಭಿಸಿತ್ತು. ಡಿಸೆಂಬರ್ 25 ರಂದು ನವ ಮಂಗಳೂರು ಬಂದರಿಗೆ ತಲುಪಬೇಕಿತ್ತು. ಡಿಸೆಂಬರ್ 23 ರಂದು ಗುಜರಾತ್ನ ವೆರಾವಲ್ ಕರಾವಳಿಯಿಂದ ಸುಮಾರು 200 ನಾಟಿಕಲ್ ಮೈಲುಗಳಷ್ಟು ದೂರದ ಸಮುದ್ರದಲ್ಲಿ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿತ್ತು. ಜಪಾನ್ ಒಡೆತನದ ಹಡಗು ಇದಾಗಿದ್ದು, ಇಸ್ರೇಲ್ ಸಹಭಾಗಿತ್ವ ಹೊಂದಿದೆ.



ದಾಳಿಯ ಮಾಹಿತಿ ತಿಳಿದ ತಕ್ಷಣ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್ಗೆ ಸಂಕಷ್ಟದಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ಹೋಗುವಂತೆ ಸೂಚಿಸಲಾಗಿತ್ತು. ಅದರಂತೆ ದಾಳಿಗೀಡಾದ ಎಂವಿ ಕೆಮ್ ಫ್ಲೂಟೋ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ಮುಂಬೈ ಬಂದರಿಗೆ ತಲುಪುವಂತೆ ಮಾಡಿದೆ.
ಪರಿಶೀಲನೆ ಬಳಿಕ ಇದು ಡ್ರೋನ್ ದಾಳಿ ಎಂದು ಭಾರತೀಯ ನೌಕಾಪಡೆ ಖಚಿತಪಡಿಸಿದೆ. ಹೆಚ್ಚಿನ ವಿವರಗಳಿಗಾಗಿ ಫೋರೆನ್ಸಿಕ್ ತನಿಖೆಯ ನಂತರ ದುರಸ್ತಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಭಾರತೀಯ ನೌಕಾಪಡೆಯು ಅರಬ್ಬೀ ಸಮುದ್ರದಲ್ಲಿ ಹಡಗುಗಳ ಮೇಲಿನ ದಾಳಿಯ ದೃಷ್ಟಿಯಿಂದ ಕಣ್ಗಾವಲುಗಾಗಿ P-8I ಗಸ್ತು ವಿಮಾನಗಳನ್ನು ನಿಯೋಜಿಸಿದೆ.
Chemical tanker MV Chem Pluto was struck by a drone off India's west coast on Saturday. The attack came amid increasing concerns over various commercial vessels being targeted reportedly by Iran-backed Houthi militants in the Red Sea and Gulf of Aden amid the Israel-Hamas conflict. The vessel with 21 Indian and one Vietnamese crew, anchored at outer anchorage off Mumbai at 3.30 pm.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm