ಬ್ರೇಕಿಂಗ್ ನ್ಯೂಸ್
26-12-23 02:10 pm HK News Desk ದೇಶ - ವಿದೇಶ
ಮುಂಬೈ, ಡಿ.26: ಅರಬ್ಬೀ ಸಮುದ್ರದಲ್ಲಿ ಡ್ರೋಣ್ ದಾಳಿಗೆ ಒಳಗಾಗಿದ್ದ ಇಸ್ರೇಲ್ ಮೂಲದ ವಾಣಿಜ್ಯ ಹಡಗು ಎಂವಿ ಕೆಮ್ ಫ್ಲೂಟೊ ಸದ್ಯ ಮುಂಬೈ ಬಂದರನ್ನು ತಲುಪಿದೆ. ಡ್ರೋನ್ ದಾಳಿಯಿಂದ ಹಡಗಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದ್ದು ನೌಕಾಸೇನೆ ವಿವಿಧ ಏಜನ್ಸಿಗಳ ಜೊತೆಗೆ ಹೆಚ್ಚಿನ ತನಿಖೆ ಆರಂಭಿಸಿದೆ.
ಸೌದಿ ಅರೇಬಿಯಾದಿಂದ ಮಂಗಳೂರಿನ ಬಂದರಿಗೆ ಕಚ್ಚಾ ತೈಲ ಹೊತ್ತುಕೊಂಡು ಹೊರಟಿದ್ದ ಹಡಗಿನ ಮೇಲೆ ಗುಜರಾತ್ ಬಳಿ ಸಮುದ್ರ ಮಧ್ಯೆ ಡ್ರೋಣ್ ದಾಳಿ ನಡೆಸಲಾಗಿತ್ತು. ಈ ದಾಳಿಯನ್ನು ಇರಾನ್ ನಡೆಸಿದೆ ಎಂದು ಅಮೆರಿಕದ ಭದ್ರತಾ ಸಂಸ್ಥೆ ಹೇಳಿತ್ತು. ಸರಕು ಹಡಗು ಡಿಸೆಂಬರ್ 19 ರಂದು ಪ್ರಯಾಣ ಆರಂಭಿಸಿತ್ತು. ಡಿಸೆಂಬರ್ 25 ರಂದು ನವ ಮಂಗಳೂರು ಬಂದರಿಗೆ ತಲುಪಬೇಕಿತ್ತು. ಡಿಸೆಂಬರ್ 23 ರಂದು ಗುಜರಾತ್ನ ವೆರಾವಲ್ ಕರಾವಳಿಯಿಂದ ಸುಮಾರು 200 ನಾಟಿಕಲ್ ಮೈಲುಗಳಷ್ಟು ದೂರದ ಸಮುದ್ರದಲ್ಲಿ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿತ್ತು. ಜಪಾನ್ ಒಡೆತನದ ಹಡಗು ಇದಾಗಿದ್ದು, ಇಸ್ರೇಲ್ ಸಹಭಾಗಿತ್ವ ಹೊಂದಿದೆ.



ದಾಳಿಯ ಮಾಹಿತಿ ತಿಳಿದ ತಕ್ಷಣ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್ಗೆ ಸಂಕಷ್ಟದಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ಹೋಗುವಂತೆ ಸೂಚಿಸಲಾಗಿತ್ತು. ಅದರಂತೆ ದಾಳಿಗೀಡಾದ ಎಂವಿ ಕೆಮ್ ಫ್ಲೂಟೋ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ಮುಂಬೈ ಬಂದರಿಗೆ ತಲುಪುವಂತೆ ಮಾಡಿದೆ.
ಪರಿಶೀಲನೆ ಬಳಿಕ ಇದು ಡ್ರೋನ್ ದಾಳಿ ಎಂದು ಭಾರತೀಯ ನೌಕಾಪಡೆ ಖಚಿತಪಡಿಸಿದೆ. ಹೆಚ್ಚಿನ ವಿವರಗಳಿಗಾಗಿ ಫೋರೆನ್ಸಿಕ್ ತನಿಖೆಯ ನಂತರ ದುರಸ್ತಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಭಾರತೀಯ ನೌಕಾಪಡೆಯು ಅರಬ್ಬೀ ಸಮುದ್ರದಲ್ಲಿ ಹಡಗುಗಳ ಮೇಲಿನ ದಾಳಿಯ ದೃಷ್ಟಿಯಿಂದ ಕಣ್ಗಾವಲುಗಾಗಿ P-8I ಗಸ್ತು ವಿಮಾನಗಳನ್ನು ನಿಯೋಜಿಸಿದೆ.
Chemical tanker MV Chem Pluto was struck by a drone off India's west coast on Saturday. The attack came amid increasing concerns over various commercial vessels being targeted reportedly by Iran-backed Houthi militants in the Red Sea and Gulf of Aden amid the Israel-Hamas conflict. The vessel with 21 Indian and one Vietnamese crew, anchored at outer anchorage off Mumbai at 3.30 pm.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm