ಬ್ರೇಕಿಂಗ್ ನ್ಯೂಸ್
27-12-23 03:40 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಡಿ 27: ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಕರ್ನಾಟಕದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ, ನಾಲ್ವರು ದುರ್ಮರಣ ಹೊಂದಿದ್ದಾರೆ. ಬುಧವಾರ ಮುಂಜಾನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ದುರಂತ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕರ್ನಾಟಕ ರಾಜ್ಯದವರಾಗಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ 8 ತಿಂಗಳ ಮಗು ಬದುಕುಳಿದಿದೆ.
ಕಲಬುರಗಿಯ ಶ್ರೀಶೈಲ ಚಂಡೇಶ ಕುಂಬಾರ (56) ಶಶಿಕಲಾ ಶ್ರೀಶೈಲ್ ಕುಂಬಾರ (50) ಬಾಗಲಕೋಟೆಯ ಜ್ಯೋತಿ ದೀಪಕ್ ಹಿರೇಮಠ (38) ಸ್ಥಳದಲ್ಲೇ ಮೃತಪಟ್ಟರೆ, ಹುಬ್ಬಳ್ಳಿಯ ಶಾರದಾ ದೀಪಕ್ ಹಿರೇಮಠ (70) ತೀವ್ರವಾಗಿ ಗಾಯಗೊಂಡು ಕರ್ಮಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅಸುನೀಗಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಕರ್ನಾಟಕದ ಕಲಬುರಗಿಯಿಂದ 8 ಮಂದಿ ಭಕ್ತರು ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಕರ್ಮಲ ತಾಲೂಕಿನ ಪಾಂಡೆ ಗ್ರಾಮದ ಬಳಿ ಕಾರು ತೆರಳುತ್ತಿದ್ದಾಗ ಎದುರಿಗೆ ಬಂದ ಕಂಟೈನರ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತು ಎಂದರೆ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.
ಬೆಳ್ಳಂಬೆಳಗ್ಗೆ ನಡೆದ ಅಪಘಾತದ ದೊಡ್ಡ ಸದ್ದ ಕೇಳಿದ ಗ್ರಾಮದ ಕೆಲವರು ಸ್ಥಳಕ್ಕೆ ಬಂದು ಕಾರಿನಲ್ಲಿ ಸಿಕ್ಕಿದ್ದವರನ್ನು ಹೊರತೆಗೆದಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಪೈಕಿ ತೀವ್ರ ಗಾಯಗೊಂಡಿದ್ದ ಶಾರದಾ ದೀಪಕ್ ಎಂಬುವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಾಗ ಮೃತಪಟ್ಟಿದ್ದಾರೆ.
8 ಮಂದಿಯ ಪೈಕಿ ನಾಲ್ವರು ಸಾವಿಗೀಡಾದರೆ, 8 ತಿಂಗಳ ಹಸುಗೂಸು ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಲ ಗಾಯಾಳುಗಳನ್ನು ಕರ್ಮಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ನಂತರ ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A terrible accident took place today (Wednesday) around 5:30 am near Pande (Karmala taluka, district Solapur) on the Paranda-Karmala road in the district. It is reported that four people were killed on the spot and six others were injured in the accident that took place between the container and the car. The accident was so severe that the car involved in the accident hit the container and went down the road and overturned.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm