ಬ್ರೇಕಿಂಗ್ ನ್ಯೂಸ್
29-12-23 01:02 pm HK News Desk ದೇಶ - ವಿದೇಶ
ಮುಂಬೈ, ಡಿ.29: ಮುಂಬೈ ಮೂಲದ ಮುಸ್ಲಿಂ ಯುವತಿಯೊಬ್ಬರು ಕಾಲ್ನಡಿಗೆಯಲ್ಲೇ ರಾಮನ ಜನ್ಮಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ರಾಮನ ಮೇಲಿನ ಭಕ್ತಿ ಮತ್ತು ಮತ ಸೌಹಾರ್ದಕ್ಕಾಗಿ ಪಾದಯಾತ್ರೆ ಕೈಗೊಂಡಿರುವ ಶಬನಮ್ ಈಗ ಸೋಶಿಯಲ್ ಮೀಡಿಯಾದಲ್ಲಿ ಐಕಾನ್ ಆಗಿದ್ದಾರೆ.
ಶಬನಮ್ ತನ್ನ ಗೆಳೆಯರಾದ ರಮಣ್ ರಾಜ್ ಶರ್ಮಾ ಮತ್ತು ವಿನೀತ್ ಪಾಂಡೆ ಜೊತೆಯಲ್ಲಿ ಮುಂಬೈನಿಂದ 1,425 ಕಿಲೋಮೀಟರ್ ದೂರದ ಅಯೋಧ್ಯೆಗೆ ಕಾಲ್ನಡಿಗೆ ಮೂಲಕವೇ ತಲುಪಲು ಹೊರಟಿದ್ದಾರೆ. ಶಬನಮ್ ಮುಸ್ಲಿಂ ಧರ್ಮೀಯರಾಗಿದ್ದರೂ, ಭಗವಾನ್ ರಾಮನ ಮೇಲೆ ಭಕ್ತಿ ಹೊಂದಿದ್ದಾರೆ. ಶಬನಮ್ ಈಗ ಮಧ್ಯಪ್ರದೇಶದ ಸಿಂಧವಾ ಜಿಲ್ಲೆ ತಲುಪಿದ್ದು ಪ್ರತಿದಿನ 25-30 ಕಿಲೋಮೀಟರ್ ಪಾದಯಾತ್ರೆ ಮಾಡುತ್ತಿದ್ದಾರೆ.

ಸುದೀರ್ಘ ಕಾಲ್ನಡಿಗೆ ಯಾತ್ರೆಯ ದಣಿವಿನ ಹೊರತಾಗಿಯೂ, ಮೂವರು ಕೂಡ ತಮ್ಮನ್ನು ರಾಮನ ಮೇಲಿನ ಭಕ್ತಿಯೇ ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಹೇಳಿದ್ದಾರೆ. ಈ ಮೂವರು ಈಗಾಗಲೇ ಮಧ್ಯಪ್ರದೇಶದ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಮನ ಆರಾಧನೆಯು ಯಾವುದೇ ನಿರ್ದಿಷ್ಟ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಗಡಿ, ಭಾಷೆ, ಧರ್ಮಗಳನ್ನು ಮೀರಿದೆ. ಇಡೀ ಜಗತ್ತನ್ನು ಒಳಗೊಳ್ಳುತ್ತಿದೆ. ಭಗವಾನ್ ರಾಮನು ಜಾತಿ ಅಥವಾ ಧರ್ಮವನ್ನು ಮೀರಿ ಎಲ್ಲರಿಗೂ ಸೇರಿದವನು ಎಂದು ಶಬನಮ್ ದೃಢವಾಗಿ ಹೇಳುತ್ತಾರೆ. ಶಬನಮ್ ಯಾತ್ರೆಗೆ ಯಾವುದೇ ಸಮಸ್ಯೆಯಿಲ್ಲ. ಆಕೆಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ, ಊಟ ಮತ್ತು ವಸತಿ ವ್ಯವಸ್ಥೆಯಲ್ಲಿ ಪೊಲೀಸರು ಸಾಥ್ ನೀಡಿದ್ದಾರೆ. ಮಹಾರಾಷ್ಟ್ರದ ಸೂಕ್ಷ್ಮ ಪ್ರದೇಶಗಳ ಮೂಲಕ ಹಾದುಹೋಗುವಾಗ ಪೊಲೀಸರು ರಕ್ಷಣೆಯನ್ನೂ ನೀಡಿದ್ದಾರೆ.
ಮುಸ್ಲಿಂ ಮಹಿಳೆ ಶಬನಮ್ ನಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಅನೇಕ ಮುಸ್ಲಿಮರು ಶಬನಮ್ ಅವರಿಗೆ ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ. ಮತ ಸೌಹಾರ್ದ ಸಾರುವುದಕ್ಕಾಗಿ ಮಹಿಳೆಯ ದಿಟ್ಟ ನಡಿಗೆ ಎಂದು ಹೇಳಿದ್ದಾರೆ.
In a tale that challenges stereotypes and exemplifies the universal nature of faith, Shabnam, a young Muslim woman from Mumbai, has embarked on a journey from Mumbai to Ayodhya. Accompanied by her companions, Raman Raj Sharma and Vineet Pandey, Shabnam set out to cover a distance of 1,425 kilometres on foot.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm