ಬ್ರೇಕಿಂಗ್ ನ್ಯೂಸ್
29-12-23 07:44 pm HK News Desk ದೇಶ - ವಿದೇಶ
ಲಕ್ನೋ, ಡಿ.29: ಮುಸ್ಲಿಂ ಮಹಿಳೆಯನ್ನು ಮದುವೆಯಾಗುವುದಕ್ಕಾಗಿ ಮತಾಂತರಗೊಂಡ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ಹುದ್ದೆಯಲ್ಲಿದ್ದ ಆಶಿಷ್ ಗುಪ್ತಾ ಎಂಬಾತನನ್ನು ಉತ್ತರ ಪ್ರದೇಶ ಸರಕಾರ ಸರ್ಕಾರಿ ಹುದ್ದೆಯಿಂದ ವಜಾ ಮಾಡಿದೆ.
ಉತ್ತರ ಪ್ರದೇಶದ ಮೌಧಾ ಜಿಲ್ಲೆಯಲ್ಲಿ ತಹಸೀಲ್ದಾರ್ ಆಗಿದ್ದ ಆಶಿಷ್ ಗುಪ್ತಾ ಎಂಬಾತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ತನ್ನ ಧರ್ಮವನ್ನೇ ಬದಲಿಸಿದ್ದು, ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಮೊಹಮ್ಮದ್ ಯೂಸುಫ್ ಎಂದು ಬದಲಿಸಿಕೊಂಡಿದ್ದ. ಆಮೂಲಕ ಸರ್ಕಾರಿ ಸೇವೆಯಲ್ಲಿದ್ದು ಸೇವಾ ನಿಮಯಗಳನ್ನು ಉಲ್ಲಂಘಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿ ಅರುಣ್ ಮಿಶ್ರಾ ಅವರು ಆಶಿಷ್ ಗುಪ್ತಾನನ್ನು ತಹಸೀಲ್ದಾರ್ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ತಹಸೀಲ್ದಾರ್ ಆಶಿಷ್ ಗುಪ್ತಾ ಬಗ್ಗೆ ಆರೋಪ ಕೇಳಿಬಂದಿತ್ತು. ಮೊಹಮ್ಮದ್ ಯೂಸುಫ್ ಹೆಸರಲ್ಲಿ ಈ ವ್ಯಕ್ತಿ ಅಲ್ಲಿನ ಮಸೀದಿಗೆ ತೆರಳುತ್ತಿದ್ದುದನ್ನು ಅಲ್ಲಿನವರು ವಿರೋಧಿಸಿದ್ದರು. ಮುಸ್ಲಿಂ ಅಲ್ಲದ ವ್ಯಕ್ತಿ ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾನೆಂದು ಮಸೀದಿ ಸದಸ್ಯ ಮೊಹಮ್ಮದ್ ಆಶಿಕ್, ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆಯೇ ಆಶಿಷ್ ಗುಪ್ತಾನ ಅಸಲಿ ಪತ್ನಿ ಆರತಿ ಪೊಲೀಸ್ ದೂರು ನೀಡಿದ್ದು ತನ್ನ ಪತಿ ಮತಾಂತರಗೊಂಡ ಬಗ್ಗೆ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಗೆ ಮುಸ್ಲಿಂ ಮಹಿಳೆಯರೊಂದಿಗೆ ಸಂಬಂಧ ಇದೆ. ತನ್ನ ಪತಿಯನ್ನು ಬಲವಂತದಿಂದ ಮತಾಂತರ ಮಾಡಿದ್ದಾರೆಂದು ದೂರು ನೀಡಿದ್ದಳು.
ಅಲ್ಲದೆ, ಇತರ ಮೂವರು ಆರೋಪಿಗಳ ಬಗ್ಗೆಯೂ ಆರತಿ ದೂರಿನಲ್ಲಿ ಹೇಳಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಷ್ ಗುಪ್ತಾನ ಜೊತೆಗೆ ಸಂಪರ್ಕ ಹೊಂದಿದ್ದ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುವುದಕ್ಕಾಗಿ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ.
The wife of a revenue official has filed a police complaint alleging that her husband, Ashish Gupta, converted to Islam, changed his name to Mohammad Yusuf, and married a Muslim woman in the southern Uttar Pradesh town of Maudaha.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm