ಬ್ರೇಕಿಂಗ್ ನ್ಯೂಸ್
29-12-23 07:44 pm HK News Desk ದೇಶ - ವಿದೇಶ
ಲಕ್ನೋ, ಡಿ.29: ಮುಸ್ಲಿಂ ಮಹಿಳೆಯನ್ನು ಮದುವೆಯಾಗುವುದಕ್ಕಾಗಿ ಮತಾಂತರಗೊಂಡ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ಹುದ್ದೆಯಲ್ಲಿದ್ದ ಆಶಿಷ್ ಗುಪ್ತಾ ಎಂಬಾತನನ್ನು ಉತ್ತರ ಪ್ರದೇಶ ಸರಕಾರ ಸರ್ಕಾರಿ ಹುದ್ದೆಯಿಂದ ವಜಾ ಮಾಡಿದೆ.
ಉತ್ತರ ಪ್ರದೇಶದ ಮೌಧಾ ಜಿಲ್ಲೆಯಲ್ಲಿ ತಹಸೀಲ್ದಾರ್ ಆಗಿದ್ದ ಆಶಿಷ್ ಗುಪ್ತಾ ಎಂಬಾತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ತನ್ನ ಧರ್ಮವನ್ನೇ ಬದಲಿಸಿದ್ದು, ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಮೊಹಮ್ಮದ್ ಯೂಸುಫ್ ಎಂದು ಬದಲಿಸಿಕೊಂಡಿದ್ದ. ಆಮೂಲಕ ಸರ್ಕಾರಿ ಸೇವೆಯಲ್ಲಿದ್ದು ಸೇವಾ ನಿಮಯಗಳನ್ನು ಉಲ್ಲಂಘಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿ ಅರುಣ್ ಮಿಶ್ರಾ ಅವರು ಆಶಿಷ್ ಗುಪ್ತಾನನ್ನು ತಹಸೀಲ್ದಾರ್ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ತಹಸೀಲ್ದಾರ್ ಆಶಿಷ್ ಗುಪ್ತಾ ಬಗ್ಗೆ ಆರೋಪ ಕೇಳಿಬಂದಿತ್ತು. ಮೊಹಮ್ಮದ್ ಯೂಸುಫ್ ಹೆಸರಲ್ಲಿ ಈ ವ್ಯಕ್ತಿ ಅಲ್ಲಿನ ಮಸೀದಿಗೆ ತೆರಳುತ್ತಿದ್ದುದನ್ನು ಅಲ್ಲಿನವರು ವಿರೋಧಿಸಿದ್ದರು. ಮುಸ್ಲಿಂ ಅಲ್ಲದ ವ್ಯಕ್ತಿ ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾನೆಂದು ಮಸೀದಿ ಸದಸ್ಯ ಮೊಹಮ್ಮದ್ ಆಶಿಕ್, ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆಯೇ ಆಶಿಷ್ ಗುಪ್ತಾನ ಅಸಲಿ ಪತ್ನಿ ಆರತಿ ಪೊಲೀಸ್ ದೂರು ನೀಡಿದ್ದು ತನ್ನ ಪತಿ ಮತಾಂತರಗೊಂಡ ಬಗ್ಗೆ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಗೆ ಮುಸ್ಲಿಂ ಮಹಿಳೆಯರೊಂದಿಗೆ ಸಂಬಂಧ ಇದೆ. ತನ್ನ ಪತಿಯನ್ನು ಬಲವಂತದಿಂದ ಮತಾಂತರ ಮಾಡಿದ್ದಾರೆಂದು ದೂರು ನೀಡಿದ್ದಳು.
ಅಲ್ಲದೆ, ಇತರ ಮೂವರು ಆರೋಪಿಗಳ ಬಗ್ಗೆಯೂ ಆರತಿ ದೂರಿನಲ್ಲಿ ಹೇಳಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಷ್ ಗುಪ್ತಾನ ಜೊತೆಗೆ ಸಂಪರ್ಕ ಹೊಂದಿದ್ದ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುವುದಕ್ಕಾಗಿ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ.
The wife of a revenue official has filed a police complaint alleging that her husband, Ashish Gupta, converted to Islam, changed his name to Mohammad Yusuf, and married a Muslim woman in the southern Uttar Pradesh town of Maudaha.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm