ಬ್ರೇಕಿಂಗ್ ನ್ಯೂಸ್
29-12-23 07:44 pm HK News Desk ದೇಶ - ವಿದೇಶ
ಲಕ್ನೋ, ಡಿ.29: ಮುಸ್ಲಿಂ ಮಹಿಳೆಯನ್ನು ಮದುವೆಯಾಗುವುದಕ್ಕಾಗಿ ಮತಾಂತರಗೊಂಡ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ಹುದ್ದೆಯಲ್ಲಿದ್ದ ಆಶಿಷ್ ಗುಪ್ತಾ ಎಂಬಾತನನ್ನು ಉತ್ತರ ಪ್ರದೇಶ ಸರಕಾರ ಸರ್ಕಾರಿ ಹುದ್ದೆಯಿಂದ ವಜಾ ಮಾಡಿದೆ.
ಉತ್ತರ ಪ್ರದೇಶದ ಮೌಧಾ ಜಿಲ್ಲೆಯಲ್ಲಿ ತಹಸೀಲ್ದಾರ್ ಆಗಿದ್ದ ಆಶಿಷ್ ಗುಪ್ತಾ ಎಂಬಾತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ತನ್ನ ಧರ್ಮವನ್ನೇ ಬದಲಿಸಿದ್ದು, ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಮೊಹಮ್ಮದ್ ಯೂಸುಫ್ ಎಂದು ಬದಲಿಸಿಕೊಂಡಿದ್ದ. ಆಮೂಲಕ ಸರ್ಕಾರಿ ಸೇವೆಯಲ್ಲಿದ್ದು ಸೇವಾ ನಿಮಯಗಳನ್ನು ಉಲ್ಲಂಘಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿ ಅರುಣ್ ಮಿಶ್ರಾ ಅವರು ಆಶಿಷ್ ಗುಪ್ತಾನನ್ನು ತಹಸೀಲ್ದಾರ್ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ತಹಸೀಲ್ದಾರ್ ಆಶಿಷ್ ಗುಪ್ತಾ ಬಗ್ಗೆ ಆರೋಪ ಕೇಳಿಬಂದಿತ್ತು. ಮೊಹಮ್ಮದ್ ಯೂಸುಫ್ ಹೆಸರಲ್ಲಿ ಈ ವ್ಯಕ್ತಿ ಅಲ್ಲಿನ ಮಸೀದಿಗೆ ತೆರಳುತ್ತಿದ್ದುದನ್ನು ಅಲ್ಲಿನವರು ವಿರೋಧಿಸಿದ್ದರು. ಮುಸ್ಲಿಂ ಅಲ್ಲದ ವ್ಯಕ್ತಿ ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾನೆಂದು ಮಸೀದಿ ಸದಸ್ಯ ಮೊಹಮ್ಮದ್ ಆಶಿಕ್, ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆಯೇ ಆಶಿಷ್ ಗುಪ್ತಾನ ಅಸಲಿ ಪತ್ನಿ ಆರತಿ ಪೊಲೀಸ್ ದೂರು ನೀಡಿದ್ದು ತನ್ನ ಪತಿ ಮತಾಂತರಗೊಂಡ ಬಗ್ಗೆ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಗೆ ಮುಸ್ಲಿಂ ಮಹಿಳೆಯರೊಂದಿಗೆ ಸಂಬಂಧ ಇದೆ. ತನ್ನ ಪತಿಯನ್ನು ಬಲವಂತದಿಂದ ಮತಾಂತರ ಮಾಡಿದ್ದಾರೆಂದು ದೂರು ನೀಡಿದ್ದಳು.
ಅಲ್ಲದೆ, ಇತರ ಮೂವರು ಆರೋಪಿಗಳ ಬಗ್ಗೆಯೂ ಆರತಿ ದೂರಿನಲ್ಲಿ ಹೇಳಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಷ್ ಗುಪ್ತಾನ ಜೊತೆಗೆ ಸಂಪರ್ಕ ಹೊಂದಿದ್ದ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುವುದಕ್ಕಾಗಿ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ.
The wife of a revenue official has filed a police complaint alleging that her husband, Ashish Gupta, converted to Islam, changed his name to Mohammad Yusuf, and married a Muslim woman in the southern Uttar Pradesh town of Maudaha.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm