ಬ್ರೇಕಿಂಗ್ ನ್ಯೂಸ್
01-01-24 02:19 pm HK News Desk ದೇಶ - ವಿದೇಶ
ನವದೆಹಲಿ, ಜ.1: 2024ರ ಕ್ಯಾಲೆಂಡರ್ ವರ್ಷದ ಮೊದಲ ದಿನವೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೊಸತಾಗಿ ಸ್ಯಾಟಲೈಟ್ ಉಡಾವಣೆ ಮಾಡಿದೆ. ಬ್ರಹ್ಮಾಂಡದ ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್ಗಳ ಬಗ್ಗೆ ಅಧ್ಯಯನ ನಡೆಸಲು ಎಕ್ಸ್ ರೇ ಪೋಲಾರ್ಮೀಟರ್ ಉಪಗ್ರಹವನ್ನು (ಎಕ್ಸ್ಪೋಸ್ಯಾಟ್) ಸೋಮವಾರ ಉಡಾವಣೆ ಮಾಡಿದೆ.
ಇದರೊಂದಿಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ 'ನಾಸಾ'ದ ಬಳಿಕ ಬಾಹ್ಯಾಕಾಶದ ಕಪ್ಪು ಕುಳಿಗಳ ಅಧ್ಯಯನಕ್ಕೆ ಮುಂದಾದ ಎರಡನೇ ದೇಶ ಎಂಬ ಹೆಗ್ಗಳಿಕೆ ಭಾರತಕ್ಕೆ ಸೇರಿದೆ. ಈ ಸ್ಯಾಟಲೈಟ್ ಅತ್ಯಾಧುನಿಕ ಖಗೋಳ ವೀಕ್ಷಣಾ ತಂತ್ರಜ್ಞಾನವನ್ನು ಒಳಗೊಂಡಿದ್ದು, ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಅಧ್ಯಯನಕ್ಕೆ ಮೀಸಲಾಗಿದೆ.
ಎಕ್ಸ್ ರೇ ಪೋಟಾನ್ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು, ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್ಗಳಿಂದ ಹೊರಸೂಸುವ ವಿಕಿರಣಗಳ ಅಧ್ಯಯನಕ್ಕೆ ಎಕ್ಸ್ಪೋ ಸ್ಯಾಟ್ ಸಹಾಯ ಮಾಡಲಿದೆ. ನಕ್ಷತ್ರಗಳು ಸಾಮಾನ್ಯವಾಗಿ ತಮ್ಮಲ್ಲಿನ ಉರಿಯುವ ಶಕ್ತಿಯನ್ನು ಕಳಕೊಂಡು 'ಮೃತ'ಪಟ್ಟಾಗ ಅವು ತಮ್ಮದೇ ಗುರುತ್ವದ ಅಡಿಯಲ್ಲಿ ಕಪ್ಪು ಕುಳಿಗಳಾಗಿ ಅಥವಾ ನ್ಯೂಟ್ರಾನ್ ನಕ್ಷತ್ರಗಳಾಗಿ ಮಾರ್ಪಡುತ್ತವೆ. ಕಪ್ಪು ಕುಳಿಗಳು ಬ್ರಹ್ಮಾಂಡದಲ್ಲಿಯೇ ಅತ್ಯಧಿಕ ಗುರುತ್ವಾಕರ್ಷಣ ಶಕ್ತಿ ಹೊಂದಿರುತ್ತವೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುವುದರಿಂದ ಬಾಹ್ಯಾಕಾಶ ಮತ್ತು ಬ್ರಹ್ಮಾಂಡದ ಬಗೆಗೆನ ನಿಗೂಢತೆಗಳನ್ನು ಭೇದಿಸಲು ಸಹಾಯವಾಗಲಿದೆ.
ಎಕ್ಸ್ಪೋ ಸ್ಯಾಟ್ ಉಪಗ್ರಹವು ಸುಮಾರು 250 ಕೋಟಿ ರೂ. ವೆಚ್ಚದ್ದಾಗಿದ್ದು ಐದು ವರ್ಷಗಳ ಕಾಲ ಕಾರ್ಯಾಚರಣೆಯಲ್ಲಿ ಇರುತ್ತದೆ.
Having conquered the Moon in 2023, the Indian Space Research Organisation (Isro) ushered in 2024 with a thunderous launch of the Polar Satellite Launch Vehicle (PSLV) on its 60th flight carrying the XPoSat mission to space.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm