ಬ್ರೇಕಿಂಗ್ ನ್ಯೂಸ್
02-01-24 12:53 pm HK News Desk ದೇಶ - ವಿದೇಶ
ಟೋಕಿಯೊ, ಜ 02: ಹೊಸ ವರ್ಷದ ಮೊದಲ ದಿನವೇ ಜಪಾನ್ ಸರಣಿ ಭೂಕಂಪಗಳಿಂದ ನಲುಗಿ ಹೋಗಿದೆ, ಸೋಮವಾರದಿಂದ ಇಲ್ಲಿಯವರೆಗೆ 155 ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿವೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಭೂಕಂಪನದಿಂದ ಕನಿಷ್ಠ 12 ಮಂದಿ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ. ಅಲ್ಲದೆ ಬದುಕುಳಿದವರ ಹುಡುಕಾಟದಲ್ಲಿ ರಕ್ಷಣಾ ತಂಡ ನಿರತವಾಗಿದೆ ಎಂದು ಹೇಳಲಾಗಿದೆ, ಭೂಕಂಪದ ತೀವ್ರತೆಗೆ ಸಮುದ್ರದಲ್ಲಿ ಸುನಾಮಿ ಭೀತಿ ಆವರಿಸಿದ್ದು ದೊಡ್ಡ ದೊಡ್ಡ ಅಲೆಗಳ ಹೊಡೆತಕ್ಕೆ ಅನೇಕ ಮನೆಗಳು ನೆಲಸಮವಾಗಿದ್ದು ಎಂದು ಅಧಿಕಾರಿಗಳು ಹೇಳಿದ್ದಾರೆ

ಭೂಕಂಪನದಿಂದ ವಾಜಿಮಾ ಪಟ್ಟಣದಲ್ಲಿ ಸುಮಾರು 30 ಕಟ್ಟಡಗಳು ಕುಸಿದಿವೆ. ವಿದ್ಯುತ್ ಕಡಿತದಿಂದ 32,700 ಕ್ಕೂ ಹೆಚ್ಚು ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳು ಕುಸಿದ ಪರಿಣಾಮ ರಕ್ಷಣಾ ಕಾರ್ಯಾಚಣೆ, ವೈದ್ಯಕೀಯ ಸಹಾಯಕ್ಕೆ ತೊಡಕು ಉಂಟಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದ್ದು, ಈ ಹಿನ್ನೆಲೆ ಜನರು ಕರಾವಳಿ ಪ್ರದೇಶಗಳನ್ನು ತ್ವರಿತವಾಗಿ ಬಿಟ್ಟು ಕಟ್ಟಡಗಳ ಮೇಲ್ಭಾಗಕ್ಕೆ ಅಥವಾ ಸಾಧ್ಯವಾದಷ್ಟು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

ಎನ್ಎಚ್ಕೆ ಪ್ರಕಾರ, ಇಶಿಕಾವಾದಲ್ಲಿನ ವಾಜಿಮಾ ನಗರದ ತೀರಕ್ಕೆ 1 ಮೀಟರ್ಗಿಂತ ಹೆಚ್ಚು ಎತ್ತರದ ಅಲೆಗಳು ಅಪ್ಪಳಿಸಿದೆ. ಆದರೆ ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ
2011 ರ ಟೊಹೊಕು ಭೂಕಂಪ ಮತ್ತು ಸುನಾಮಿ ಘಟನೆಯನ್ನು ಸಾಮಾನ್ಯವಾಗಿ ಗ್ರೇಟ್ ಈಸ್ಟ್ ಜಪಾನ್ ಭೂಕಂಪ ಮತ್ತು ಸುನಾಮಿ ಎಂದು ಕರೆಯಲಾಗುತ್ತದೆ. ಆ ಅವಘದಲ್ಲಿ 18,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು
The tsunami threat resulting from a powerful earthquake that struck central Japan on Monday has been deemed largely over, according to a statement from the Pacific Tsunami Warning Center based in Hawaii.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm