ಬ್ರೇಕಿಂಗ್ ನ್ಯೂಸ್
02-01-24 12:53 pm HK News Desk ದೇಶ - ವಿದೇಶ
ಟೋಕಿಯೊ, ಜ 02: ಹೊಸ ವರ್ಷದ ಮೊದಲ ದಿನವೇ ಜಪಾನ್ ಸರಣಿ ಭೂಕಂಪಗಳಿಂದ ನಲುಗಿ ಹೋಗಿದೆ, ಸೋಮವಾರದಿಂದ ಇಲ್ಲಿಯವರೆಗೆ 155 ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿವೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಭೂಕಂಪನದಿಂದ ಕನಿಷ್ಠ 12 ಮಂದಿ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ. ಅಲ್ಲದೆ ಬದುಕುಳಿದವರ ಹುಡುಕಾಟದಲ್ಲಿ ರಕ್ಷಣಾ ತಂಡ ನಿರತವಾಗಿದೆ ಎಂದು ಹೇಳಲಾಗಿದೆ, ಭೂಕಂಪದ ತೀವ್ರತೆಗೆ ಸಮುದ್ರದಲ್ಲಿ ಸುನಾಮಿ ಭೀತಿ ಆವರಿಸಿದ್ದು ದೊಡ್ಡ ದೊಡ್ಡ ಅಲೆಗಳ ಹೊಡೆತಕ್ಕೆ ಅನೇಕ ಮನೆಗಳು ನೆಲಸಮವಾಗಿದ್ದು ಎಂದು ಅಧಿಕಾರಿಗಳು ಹೇಳಿದ್ದಾರೆ

ಭೂಕಂಪನದಿಂದ ವಾಜಿಮಾ ಪಟ್ಟಣದಲ್ಲಿ ಸುಮಾರು 30 ಕಟ್ಟಡಗಳು ಕುಸಿದಿವೆ. ವಿದ್ಯುತ್ ಕಡಿತದಿಂದ 32,700 ಕ್ಕೂ ಹೆಚ್ಚು ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳು ಕುಸಿದ ಪರಿಣಾಮ ರಕ್ಷಣಾ ಕಾರ್ಯಾಚಣೆ, ವೈದ್ಯಕೀಯ ಸಹಾಯಕ್ಕೆ ತೊಡಕು ಉಂಟಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದ್ದು, ಈ ಹಿನ್ನೆಲೆ ಜನರು ಕರಾವಳಿ ಪ್ರದೇಶಗಳನ್ನು ತ್ವರಿತವಾಗಿ ಬಿಟ್ಟು ಕಟ್ಟಡಗಳ ಮೇಲ್ಭಾಗಕ್ಕೆ ಅಥವಾ ಸಾಧ್ಯವಾದಷ್ಟು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

ಎನ್ಎಚ್ಕೆ ಪ್ರಕಾರ, ಇಶಿಕಾವಾದಲ್ಲಿನ ವಾಜಿಮಾ ನಗರದ ತೀರಕ್ಕೆ 1 ಮೀಟರ್ಗಿಂತ ಹೆಚ್ಚು ಎತ್ತರದ ಅಲೆಗಳು ಅಪ್ಪಳಿಸಿದೆ. ಆದರೆ ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ
2011 ರ ಟೊಹೊಕು ಭೂಕಂಪ ಮತ್ತು ಸುನಾಮಿ ಘಟನೆಯನ್ನು ಸಾಮಾನ್ಯವಾಗಿ ಗ್ರೇಟ್ ಈಸ್ಟ್ ಜಪಾನ್ ಭೂಕಂಪ ಮತ್ತು ಸುನಾಮಿ ಎಂದು ಕರೆಯಲಾಗುತ್ತದೆ. ಆ ಅವಘದಲ್ಲಿ 18,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು
The tsunami threat resulting from a powerful earthquake that struck central Japan on Monday has been deemed largely over, according to a statement from the Pacific Tsunami Warning Center based in Hawaii.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm