ಬ್ರೇಕಿಂಗ್ ನ್ಯೂಸ್
03-01-24 11:07 am HK News Desk ದೇಶ - ವಿದೇಶ
ಅಸ್ಸಾಂ, ಜ 03: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ಧ ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ದುರ್ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇರ್ಗಾಂವ್ ಬಳಿಯ ಬಲಿಜಾನ್ ಎಂಬಲ್ಲಿ 45 ಜನರಿದ್ದ ಬಸ್, ಸರಕು ಸಾಗಣೆ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೇನ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.


'ಅಪಘಾತದಲ್ಲಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಅವರು ಹೇಳಿದ್ದಾರೆ.
ಅಪಘಾತ ಸಂಬಂಧ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ಸಿಂಗ್ ಹೇಳಿದರು.
ಗಾಯಗೊಂಡ 30 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಮುಂಜಾನೆ 4:30ರ ಸುಮಾರಿಗೆ ಗೋಲಾಘಾಟ್ನ ಕಮರ್ಗಾಂವ್ನಿಂದ ಪಿಕ್ನಿಕ್ಗಾಗಿ ತಿನ್ಸುಕಿಯಾ ಜಿಲ್ಲೆಯ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದ ಬಸ್, ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
STORY | 12 killed in bus-truck collision in Assam
— Press Trust of India (@PTI_News) January 3, 2024
READ: https://t.co/RIFKRE42J8
VIDEO: pic.twitter.com/Mdrh8gSZUx
At least 12 people were killed and around 30 others injured on Wednesday in a head-on collision between a coal-laden truck and a bus in Golaghat district of Assam, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm