ಬ್ರೇಕಿಂಗ್ ನ್ಯೂಸ್
03-01-24 01:40 pm HK News Desk ದೇಶ - ವಿದೇಶ
ಕಾಬೂಲ್, ಜ 03: ಜಪಾನ್ನಲ್ಲಿ ಪ್ರಬಲ ಭೂಕಂಪನಕ್ಕೆ ಸುನಾಮಿ ಉಂಟಾಗಿ 50 ಕ್ಕೂ ಅಧಿಕ ಜನರು ಸಾವಿಗೀಡಾದ ಘಟನೆ ಬೆನ್ನಲ್ಲೇ, ಭಾರತದ ಕೆಲ ಭಾಗ ಮತ್ತು ಅಫ್ಘಾನಿಸ್ತಾನದಲ್ಲಿ ಕೂಡ ಭೂಮಿ ನಡುಗಿದೆ. ಕಡಿಮೆ ತೀವ್ರತೆಯ ಕಂಪನಗಳು ಕಂಡುಬಂದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮಂಗಳವಾರ ರಾತ್ರಿ 10.35 ನಿಮಿಷಕ್ಕೆ ಪಶ್ಚಿಮ ಬಂಗಾಳದ ಅಲಿಪುರ್ದೂರ್ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್ಎಸ್ಸಿ) ತಿಳಿಸಿದೆ. ಭೂಕಂಪವು ರಾತ್ರಿ ವೇಳೆ ಆಗಿದ್ದು, 5 ಕಿಮೀ ಆಳದಲ್ಲಿ ಕಂಪನದ ಅಲೆಗಳು ಎದ್ದಿವೆ. ಯಾವುದೇ ದೊಡ್ಡ ಪ್ರಮಾಣದಲ್ಲಿ ಸಂಭವಿಸಿಲ್ಲ. ಭೂಮಿ ನಡುಗಿದಾಗ ಜನರು ಮನೆಯಿಂದ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ ಮಣಿಪುರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪವು ಉಖ್ರುಲ್ ಪ್ರದೇಶದಲ್ಲಿ ಮಧ್ಯರಾತ್ರಿ 12.01 ನಿಮಿಷಕ್ಕೆ ಸಂಭವಿಸಿದೆ. ಜನರು ನಿದ್ರೆಯಲ್ಲಿದ್ದಾಗ ದಿಢೀರ್ ಭೂಮಿ ಅಲುಗಾಡಿದೆ. ಇದರಿಂದ ಗಾಬರಿಯಾದ ಜನರು ಕೆಲಕಾಲ ಆತಂಕಕ್ಕೀಡಾಗಿದ್ದರು. ಮನೆಯಲ್ಲಿ ಪಾತ್ರೆಗಳು ನೆಲಕ್ಕುರುಳಿ ಬಿದ್ದಿವೆ. ಹಠಾತ್ ನಡುಕದಿಂದ ಜನರು ನಿದ್ದೆಗೆಡುವಂತಾಗಿದೆ. ಉಕ್ರುಲ್ ಪ್ರದೇಶದ ಸುತ್ತಲ್ಲೂ ಬುಧವಾರ ಮಧ್ಯರಾತ್ರಿ 26 ಕಿ.ಮೀ ಆಳದಲ್ಲಿ ಕಂಪನದ ಅಲೆಗಳು ಕಂಡುಬಂದಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಬುಧವಾರ ಅರ್ಧಗಂಟೆ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ಮೊದಲು ನಗರದಿಂದ 126 ದೂರದ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಮಿ ನಡುಗಿದೆ. ಭೂಮಿಯ 80 ಕಿಮೀ ಆಳದಲ್ಲಿ ಅದರ ಕಂಪನಗಳು ಸೃಷ್ಟಿಯಾಗಿವೆ. ಇದು ಮಧ್ಯರಾತ್ರಿ 12.28 ರ ಸುಮಾರಿನಲ್ಲಿ ಜರುಗಿದೆ. ಇದಾದ ಅರ್ಧಗಂಟೆಯ ಅಂತರದಲ್ಲಿ ಫೈಜಾಬಾದ್ನ 100 ದೂರ ಪ್ರದೇಶದಲ್ಲಿ 12.55 ನಿಮಿಷಕ್ಕೆ ಮತ್ತೊಂದು ಕಂಪನ ಉಂಟಾಗಿದೆ.

4.8 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಈ ಬಾರಿ ಇದು 100 ಕಿಮೀ ಆಳದಲ್ಲಿ ಕಂಡುಬಂದಿದೆ. ಕಡಿಮೆ ಸಮಯದಲ್ಲಿ ಎರಡು ಲಘು ಕಂಪನಗಳು ಉಂಟಾಗಿದ್ದು, ಜನರನ್ನು ತೀವ್ರ ಆತಂಕಕ್ಕೆ ತಳ್ಳಿದ್ದವು. ಸದ್ಯಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ ಅಫ್ಘಾನಿಸ್ತಾನದ ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Two earthquakes of magnitude jolted Afghanistan's Fayzabad on Wednesday, the National Centre for Seismology (NCS) reported. The first quake took place at 00:28:52 IST at a depth of 80 km, 126km E of Fayzabad.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm