ಬ್ರೇಕಿಂಗ್ ನ್ಯೂಸ್
03-01-24 01:40 pm HK News Desk ದೇಶ - ವಿದೇಶ
ಕಾಬೂಲ್, ಜ 03: ಜಪಾನ್ನಲ್ಲಿ ಪ್ರಬಲ ಭೂಕಂಪನಕ್ಕೆ ಸುನಾಮಿ ಉಂಟಾಗಿ 50 ಕ್ಕೂ ಅಧಿಕ ಜನರು ಸಾವಿಗೀಡಾದ ಘಟನೆ ಬೆನ್ನಲ್ಲೇ, ಭಾರತದ ಕೆಲ ಭಾಗ ಮತ್ತು ಅಫ್ಘಾನಿಸ್ತಾನದಲ್ಲಿ ಕೂಡ ಭೂಮಿ ನಡುಗಿದೆ. ಕಡಿಮೆ ತೀವ್ರತೆಯ ಕಂಪನಗಳು ಕಂಡುಬಂದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮಂಗಳವಾರ ರಾತ್ರಿ 10.35 ನಿಮಿಷಕ್ಕೆ ಪಶ್ಚಿಮ ಬಂಗಾಳದ ಅಲಿಪುರ್ದೂರ್ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್ಎಸ್ಸಿ) ತಿಳಿಸಿದೆ. ಭೂಕಂಪವು ರಾತ್ರಿ ವೇಳೆ ಆಗಿದ್ದು, 5 ಕಿಮೀ ಆಳದಲ್ಲಿ ಕಂಪನದ ಅಲೆಗಳು ಎದ್ದಿವೆ. ಯಾವುದೇ ದೊಡ್ಡ ಪ್ರಮಾಣದಲ್ಲಿ ಸಂಭವಿಸಿಲ್ಲ. ಭೂಮಿ ನಡುಗಿದಾಗ ಜನರು ಮನೆಯಿಂದ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ ಮಣಿಪುರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪವು ಉಖ್ರುಲ್ ಪ್ರದೇಶದಲ್ಲಿ ಮಧ್ಯರಾತ್ರಿ 12.01 ನಿಮಿಷಕ್ಕೆ ಸಂಭವಿಸಿದೆ. ಜನರು ನಿದ್ರೆಯಲ್ಲಿದ್ದಾಗ ದಿಢೀರ್ ಭೂಮಿ ಅಲುಗಾಡಿದೆ. ಇದರಿಂದ ಗಾಬರಿಯಾದ ಜನರು ಕೆಲಕಾಲ ಆತಂಕಕ್ಕೀಡಾಗಿದ್ದರು. ಮನೆಯಲ್ಲಿ ಪಾತ್ರೆಗಳು ನೆಲಕ್ಕುರುಳಿ ಬಿದ್ದಿವೆ. ಹಠಾತ್ ನಡುಕದಿಂದ ಜನರು ನಿದ್ದೆಗೆಡುವಂತಾಗಿದೆ. ಉಕ್ರುಲ್ ಪ್ರದೇಶದ ಸುತ್ತಲ್ಲೂ ಬುಧವಾರ ಮಧ್ಯರಾತ್ರಿ 26 ಕಿ.ಮೀ ಆಳದಲ್ಲಿ ಕಂಪನದ ಅಲೆಗಳು ಕಂಡುಬಂದಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಬುಧವಾರ ಅರ್ಧಗಂಟೆ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ಮೊದಲು ನಗರದಿಂದ 126 ದೂರದ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಮಿ ನಡುಗಿದೆ. ಭೂಮಿಯ 80 ಕಿಮೀ ಆಳದಲ್ಲಿ ಅದರ ಕಂಪನಗಳು ಸೃಷ್ಟಿಯಾಗಿವೆ. ಇದು ಮಧ್ಯರಾತ್ರಿ 12.28 ರ ಸುಮಾರಿನಲ್ಲಿ ಜರುಗಿದೆ. ಇದಾದ ಅರ್ಧಗಂಟೆಯ ಅಂತರದಲ್ಲಿ ಫೈಜಾಬಾದ್ನ 100 ದೂರ ಪ್ರದೇಶದಲ್ಲಿ 12.55 ನಿಮಿಷಕ್ಕೆ ಮತ್ತೊಂದು ಕಂಪನ ಉಂಟಾಗಿದೆ.

4.8 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಈ ಬಾರಿ ಇದು 100 ಕಿಮೀ ಆಳದಲ್ಲಿ ಕಂಡುಬಂದಿದೆ. ಕಡಿಮೆ ಸಮಯದಲ್ಲಿ ಎರಡು ಲಘು ಕಂಪನಗಳು ಉಂಟಾಗಿದ್ದು, ಜನರನ್ನು ತೀವ್ರ ಆತಂಕಕ್ಕೆ ತಳ್ಳಿದ್ದವು. ಸದ್ಯಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ ಅಫ್ಘಾನಿಸ್ತಾನದ ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Two earthquakes of magnitude jolted Afghanistan's Fayzabad on Wednesday, the National Centre for Seismology (NCS) reported. The first quake took place at 00:28:52 IST at a depth of 80 km, 126km E of Fayzabad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm