ಬ್ರೇಕಿಂಗ್ ನ್ಯೂಸ್
03-01-24 11:07 pm HK News Desk ದೇಶ - ವಿದೇಶ
ನವದೆಹಲಿ, ಜ.4: ಇರಾನ್ ದೇಶದ ಕೆರ್ಮಾನ್ ನಗರದಲ್ಲಿ ಬುಧವಾರ ಮಧ್ಯಾಹ್ನ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.
ಸಾಹೇಬ್ ಅಲ್- ಝಮಾನ್ ಮಸೀದಿಯ ಆವರಣದಲ್ಲಿ ಶಿಯಾಗಳು ಮೆರವಣಿಗೆ ನಡೆಸುತ್ತಿದ್ದಾಗ ಎರಡು ಬಾಂಬ್ ಸ್ಫೋಟ ಸಂಭವಿಸಿದೆ. ಇರಾನ್ ಜನರಲ್ ಖಾಸಿಂ ಸೋಲೆಮನಿ ಅವರ ಹತ್ಯೆಯ ನಾಲ್ಕನೇ ವರ್ಷಾಚರಣೆ ದಿನವೇ ಬಾಂಬ್ ದಾಳಿ ನಡೆದಿದ್ದು, ಘಟನೆಯನ್ನು ಉಗ್ರವಾದಿ ಸಂಘಟನೆಗಳು ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಕೆರ್ಮಾನ್ ನಗರದ ಡೆಪ್ಯುಟಿ ಗವರ್ನರ್, ಉಗ್ರರ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ವರದಿಯಲ್ಲಿ 103 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ರಸ್ತೆಯಲ್ಲೆಲ್ಲ ಛಿದ್ರಗೊಂಡ ದೇಹದ ಭಾಗಗಳು ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಯಾರು ಈ ಕೃತ್ಯ ಎಸಗಿದ್ದಾರೆಂದು ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಅರಬ್ ಪ್ರತ್ಯೇಕತಾವಾದಿಗಳ ಪ್ರಕಾರ, ಐಸಿಸ್ ಉಗ್ರರು ಮತ್ತು ಸುನ್ನಿ ಜಿಹಾದಿಗಳು ಮಾಡಿರುವ ಸಾಧ್ಯತೆ ಇದೆಯಂತೆ. ಇತ್ತೀಚೆಗೆ ಶಿಯಾಗಳನ್ನು ಗುರಿಯಾಗಿಸಿ ಹಲವಾರು ದಾಳಿ ನಡೆದಿದ್ದು, ಅವನ್ನು ಐಸಿಸ್ ಉಗ್ರರೇ ಮಾಡಿದ್ದಾರೆ ಎನ್ನಲಾಗುತ್ತಿದೆ. 2020ರಲ್ಲಿ ಅಮೆರಿಕದ ಡ್ರೋಣ್ ದಾಳಿಯಲ್ಲಿ ಇರಾನ್ ದೇಶದ ಪವರ್ ಫುಲ್ ವ್ಯಕ್ತಿಯಾಗಿದ್ದ ಸೋಲೆಮನಿ ಸಾವನ್ನಪ್ಪಿದ್ದ. ಆನಂತರ, ಆತನ ಸ್ಥಾನವನ್ನು ಅಯತೊಲ್ಲಾ ಆಲಿ ಖೊಮೇನಿ ಅಲಂಕರಿಸಿದ್ದ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಬಾಂಬ್ ಸ್ಫೋಟಗಳು ಸಂಭವಿಸಿವೆ. ಒಂದು ಕಿಮೀ ಅಂತರದಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಎರಡು ಕೂಡ 15 ನಿಮಿಷಗಳ ನಡುವೆ ನಡೆದಿವೆ.
State broadcaster Irib said dozens more people were wounded when the blasts hit a procession near the Saheb al-Zaman mosque in the southern city of Kerman. It cited Kerman's deputy governor as saying it was a "terrorist attack".
22-05-25 11:09 pm
HK News Desk
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm