ಬ್ರೇಕಿಂಗ್ ನ್ಯೂಸ್
07-01-24 08:48 pm HK News Desk ದೇಶ - ವಿದೇಶ
ನವದೆಹಲಿ, ಜ 07: ಪ್ರಧಾನಿ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದನ್ನು ಅಣಕಿಸಿ ಮಾಲ್ಡೀವ್ಸ್ ಸಚಿವರು ಮತ್ತು ರಾಜಕಾರಣಿಗಳು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಆಕ್ರೋಶಕ್ಕೆ ಕಾರಣವಾಗಿವೆ. ಈ ವಿಷಯವನ್ನು ಭಾರತೀಯ ರಾಯಭಾರಿ ಖಂಡಿಸಿದ ಬೆನ್ನಲ್ಲೇ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರ ತಲೆದಂಡವಾಗಿದೆ.
ನೆರೆಯ ಭಾರತವನ್ನು ಅವಮಾನಿಸುವ ಸಾಮಾಜಿಕ ಮಾಧ್ಯಮಗಳ ಕೆಲವು ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ನಿಲುವಿನ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆಯನ್ನು ನೀಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿದೆ.
ಸಚಿವೆ ಮರಿಯಮ್ ಶಿಯುನಾ ತಮ್ಮ ಟ್ವೀಟ್ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದರು. ಇದು ಟೀಕೆ, ಆಕ್ರೋಶ ಹಾಗೂ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಶಿಯುನಾ ತಮ್ಮ ಪೋಸ್ಟ್ಅನ್ನು ಒಂದೆರಡು ಗಂಟೆಗಳಲ್ಲೇ ಡೀಲಿಟ್ ಮಾಡಿದ್ದರು. ಆದರೆ, ಇದು ಅಷ್ಟೊತ್ತಿಗೆ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹದಗೆಡಿಸಿತ್ತು.
ಮಾಲ್ಡೀವ್ಸ್ನ ಭದ್ರತೆ ಮತ್ತು ಸಮೃದ್ಧಿಗೆ ಸಹಕಾರಿಯಾದ ಪ್ರಮುಖ ಮಿತ್ರ ನಾಯಕನ ಬಗ್ಗೆ ಮಾಲ್ಡೀವ್ಸ್ ಸರ್ಕಾರದ ಶಿಯುನಾ ಎಂತಹ ಭಯಾನಕ ಭಾಷೆ ಇದು. ಮುಯಿಝು ಈ ಹೇಳಿಕೆಗಳಿಂದ ದೂರವಿರಬೇಕು. ಇದು ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಮತ್ತು ಭಾರತಕ್ಕೆ ಸ್ಪಷ್ಟ ಭರವಸೆ ನೀಡಬೇಕು'' ಎಂದು ನಶೀದ್ 'ಏಕ್ಸ್' ಪೋಸ್ಟ್ನಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ, ''ಸಚಿವರ ಅವಹೇಳನಕಾರಿ ಹೇಳಿಕೆಗಳು ಖಂಡನೀಯ ಮತ್ತು ಅಸಹ್ಯಕರ'' ಎಂದು ಮಾಲ್ಡೀವ್ಸ್ ಮಾಜಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಸಚಿವರ ಬಗ್ಗೆ ಸ್ವದೇಶಿ ನಾಯಕರಿಂದಲೇ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
India has raised with the Maldives government the derogatory remarks against Prime Minister Narendra Modi by a minister of the island nation following a row that erupted after Maldivian politicians mocked the Prime Minister's Lakshadweep visit.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm